ದೇವಾಲಯಕ್ಕೆ ಬಂದ ಕಿಡಿಗೇಡಿಗಳು, ದೇವರಿಗೆ ಹಾರ ಹಾಕಿ ಎಂದು ಪ್ಲಾಸ್ಟಿಕ್ ಪೇಪರ್ ಒಳಗೊಂಡ ಹಾರದಲ್ಲಿ (ಹಾರದ ದಿಂಡಿನೊಳಗೆ ) ಮಾಂಸದ ತುಂಡು ಇಟ್ಟು ಸಿಬ್ಬಂದಿಗೆ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನದಲ್ಲಿ ಕಳೆದ 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದೇವಾಲಯಕ್ಕೆ ಬಂದ ಕಿಡಿಗೇಡಿಗಳು, ದೇವರಿಗೆ ಹಾರ ಹಾಕಿ ಎಂದು ಪ್ಲಾಸ್ಟಿಕ್ ಪೇಪರ್ ಒಳಗೊಂಡ ಹಾರದಲ್ಲಿ (ಹಾರದ ದಿಂಡಿನೊಳಗೆ) ಮಾಂಸದ ತುಂಡು ಇಟ್ಟು ಸಿಬ್ಬಂದಿಗೆ ನೀಡಿರುವ ಘಟನೆ ನಡೆದಿದೆ.
ಕಳೆದ ಹದಿನೈದು ದಿನಗಳ ಹಿಂದೆ ತಾಲೂಕಿನ ಕನಸವಾಡಿಯ ಶ್ರೀ ಶನಿಮಹಾತ್ಮಾ ದೇವಾಲಯಕ್ಕೆ ಬಂದ ಇಬ್ಬರು ಅಪರಿಚಿತ ಯುವಕರಿಂದ ಕೃತ್ಯ ನಡೆದಿದ್ದು, ಕಿಡಿಗೇಡಿಗಳ ವಿರುದ್ಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೇವಾಲಯದ ಸಿಬ್ಬಂದಿ ದೂರು ನೀಡಿದ್ದಾರೆ.
ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಇಬ್ಬರು ಯುವಕರು ಬಂದಿದ್ದಾರೆ. ದೇವರಿಗೆ ಹಾಕಿ ಎಂದು ಹೂವಿನ ಹಾರದ ಮಧ್ಯೆ ಬರುವ ಪ್ಲಾಸ್ಟಿಕ್ ಪೇಪರ್ ಒಳಗಡೆ (ದಿಂಡು) ಮಾಂಸವಿಟ್ಟು ದೇವಸ್ಥಾನದ ಸಿಬ್ಬಂದಿಗೆ ನೀಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕವರ್ ತೆಗೆದುಕೊಂಡ ಸಿಬ್ಬಂದಿ, ದೇವರಿಗೆ ಹಾರ ಹಾಕಲೆಂದು ಗರ್ಭಗುಡಿಯೊಳಗೆ ಹೋಗವಾಗ, ಮಾಂಸದ ತುಂಡು ಹಾರದಿಂದ ಕೆಳಗೆ ಬಿದ್ದಿದೆ. ಕೂಡಲೇ ದೇವಸ್ಥಾನದ ಸಿಬ್ಬಂದಿ ಕವರ್ ಹೊರಗೆ ಎಸೆದಿದ್ದಾರೆ.
ಇನ್ನು ಈ ಕೃತ್ಯಕ್ಕೆ ಕಾರಣರಾದ ಕಿಡಿಗೇಡಿಗಳು ದೇವಸ್ಥಾನಕ್ಕೆ ಬಂದು ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ದೇವಾಲಯದ ಸಿಬ್ಬಂದಿ ದೊಡ್ಡಬೆಳವಂಗಲ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆಡಳಿತ ಮಂಡಳಿ ದೇವಸ್ಥಾನದಲ್ಲಿ ಪೇಪರ್ ದಿಂಡು ಒಳಗೊಂಡ ಹಾರಗಳನ್ನು ನಿಷೇಧಿಸಿದೆ.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…