ದೇವಾಲಯಕ್ಕೆ ಬಂದ ಕಿಡಿಗೇಡಿಗಳು, ದೇವರಿಗೆ ಹಾರ ಹಾಕಿ ಎಂದು ಪ್ಲಾಸ್ಟಿಕ್ ಪೇಪರ್ ಒಳಗೊಂಡ ಹಾರದಲ್ಲಿ (ಹಾರದ ದಿಂಡಿನೊಳಗೆ ) ಮಾಂಸದ ತುಂಡು ಇಟ್ಟು ಸಿಬ್ಬಂದಿಗೆ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನದಲ್ಲಿ ಕಳೆದ 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದೇವಾಲಯಕ್ಕೆ ಬಂದ ಕಿಡಿಗೇಡಿಗಳು, ದೇವರಿಗೆ ಹಾರ ಹಾಕಿ ಎಂದು ಪ್ಲಾಸ್ಟಿಕ್ ಪೇಪರ್ ಒಳಗೊಂಡ ಹಾರದಲ್ಲಿ (ಹಾರದ ದಿಂಡಿನೊಳಗೆ) ಮಾಂಸದ ತುಂಡು ಇಟ್ಟು ಸಿಬ್ಬಂದಿಗೆ ನೀಡಿರುವ ಘಟನೆ ನಡೆದಿದೆ.
ಕಳೆದ ಹದಿನೈದು ದಿನಗಳ ಹಿಂದೆ ತಾಲೂಕಿನ ಕನಸವಾಡಿಯ ಶ್ರೀ ಶನಿಮಹಾತ್ಮಾ ದೇವಾಲಯಕ್ಕೆ ಬಂದ ಇಬ್ಬರು ಅಪರಿಚಿತ ಯುವಕರಿಂದ ಕೃತ್ಯ ನಡೆದಿದ್ದು, ಕಿಡಿಗೇಡಿಗಳ ವಿರುದ್ಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೇವಾಲಯದ ಸಿಬ್ಬಂದಿ ದೂರು ನೀಡಿದ್ದಾರೆ.
ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಇಬ್ಬರು ಯುವಕರು ಬಂದಿದ್ದಾರೆ. ದೇವರಿಗೆ ಹಾಕಿ ಎಂದು ಹೂವಿನ ಹಾರದ ಮಧ್ಯೆ ಬರುವ ಪ್ಲಾಸ್ಟಿಕ್ ಪೇಪರ್ ಒಳಗಡೆ (ದಿಂಡು) ಮಾಂಸವಿಟ್ಟು ದೇವಸ್ಥಾನದ ಸಿಬ್ಬಂದಿಗೆ ನೀಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕವರ್ ತೆಗೆದುಕೊಂಡ ಸಿಬ್ಬಂದಿ, ದೇವರಿಗೆ ಹಾರ ಹಾಕಲೆಂದು ಗರ್ಭಗುಡಿಯೊಳಗೆ ಹೋಗವಾಗ, ಮಾಂಸದ ತುಂಡು ಹಾರದಿಂದ ಕೆಳಗೆ ಬಿದ್ದಿದೆ. ಕೂಡಲೇ ದೇವಸ್ಥಾನದ ಸಿಬ್ಬಂದಿ ಕವರ್ ಹೊರಗೆ ಎಸೆದಿದ್ದಾರೆ.
ಇನ್ನು ಈ ಕೃತ್ಯಕ್ಕೆ ಕಾರಣರಾದ ಕಿಡಿಗೇಡಿಗಳು ದೇವಸ್ಥಾನಕ್ಕೆ ಬಂದು ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ದೇವಾಲಯದ ಸಿಬ್ಬಂದಿ ದೊಡ್ಡಬೆಳವಂಗಲ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆಡಳಿತ ಮಂಡಳಿ ದೇವಸ್ಥಾನದಲ್ಲಿ ಪೇಪರ್ ದಿಂಡು ಒಳಗೊಂಡ ಹಾರಗಳನ್ನು ನಿಷೇಧಿಸಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…