ದೇವಾಲಯಕ್ಕೆ ಬಂದ ಕಿಡಿಗೇಡಿಗಳು, ದೇವರಿಗೆ ಹಾರ ಹಾಕಿ ಎಂದು ಪ್ಲಾಸ್ಟಿಕ್ ಪೇಪರ್ ಒಳಗೊಂಡ ಹಾರದಲ್ಲಿ (ಹಾರದ ದಿಂಡಿನೊಳಗೆ ) ಮಾಂಸದ ತುಂಡು ಇಟ್ಟು ಸಿಬ್ಬಂದಿಗೆ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನದಲ್ಲಿ ಕಳೆದ 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದೇವಾಲಯಕ್ಕೆ ಬಂದ ಕಿಡಿಗೇಡಿಗಳು, ದೇವರಿಗೆ ಹಾರ ಹಾಕಿ ಎಂದು ಪ್ಲಾಸ್ಟಿಕ್ ಪೇಪರ್ ಒಳಗೊಂಡ ಹಾರದಲ್ಲಿ (ಹಾರದ ದಿಂಡಿನೊಳಗೆ) ಮಾಂಸದ ತುಂಡು ಇಟ್ಟು ಸಿಬ್ಬಂದಿಗೆ ನೀಡಿರುವ ಘಟನೆ ನಡೆದಿದೆ.
ಕಳೆದ ಹದಿನೈದು ದಿನಗಳ ಹಿಂದೆ ತಾಲೂಕಿನ ಕನಸವಾಡಿಯ ಶ್ರೀ ಶನಿಮಹಾತ್ಮಾ ದೇವಾಲಯಕ್ಕೆ ಬಂದ ಇಬ್ಬರು ಅಪರಿಚಿತ ಯುವಕರಿಂದ ಕೃತ್ಯ ನಡೆದಿದ್ದು, ಕಿಡಿಗೇಡಿಗಳ ವಿರುದ್ಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೇವಾಲಯದ ಸಿಬ್ಬಂದಿ ದೂರು ನೀಡಿದ್ದಾರೆ.
ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಇಬ್ಬರು ಯುವಕರು ಬಂದಿದ್ದಾರೆ. ದೇವರಿಗೆ ಹಾಕಿ ಎಂದು ಹೂವಿನ ಹಾರದ ಮಧ್ಯೆ ಬರುವ ಪ್ಲಾಸ್ಟಿಕ್ ಪೇಪರ್ ಒಳಗಡೆ (ದಿಂಡು) ಮಾಂಸವಿಟ್ಟು ದೇವಸ್ಥಾನದ ಸಿಬ್ಬಂದಿಗೆ ನೀಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕವರ್ ತೆಗೆದುಕೊಂಡ ಸಿಬ್ಬಂದಿ, ದೇವರಿಗೆ ಹಾರ ಹಾಕಲೆಂದು ಗರ್ಭಗುಡಿಯೊಳಗೆ ಹೋಗವಾಗ, ಮಾಂಸದ ತುಂಡು ಹಾರದಿಂದ ಕೆಳಗೆ ಬಿದ್ದಿದೆ. ಕೂಡಲೇ ದೇವಸ್ಥಾನದ ಸಿಬ್ಬಂದಿ ಕವರ್ ಹೊರಗೆ ಎಸೆದಿದ್ದಾರೆ.
ಇನ್ನು ಈ ಕೃತ್ಯಕ್ಕೆ ಕಾರಣರಾದ ಕಿಡಿಗೇಡಿಗಳು ದೇವಸ್ಥಾನಕ್ಕೆ ಬಂದು ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ದೇವಾಲಯದ ಸಿಬ್ಬಂದಿ ದೊಡ್ಡಬೆಳವಂಗಲ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆಡಳಿತ ಮಂಡಳಿ ದೇವಸ್ಥಾನದಲ್ಲಿ ಪೇಪರ್ ದಿಂಡು ಒಳಗೊಂಡ ಹಾರಗಳನ್ನು ನಿಷೇಧಿಸಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…