ಶನಿಮಹಾತ್ಮ ದೇವಾಲಯಕ್ಕೆ ಹಾರದ ದಿಂಡಿನೊಳಗೆ ಮಾಂಸದ ತುಂಡು ತಂದಿದ್ದ ಕಿಡಿಗೇಡಿಗಳು; ತಡವಾಗಿ ಬೆಳಕಿಗೆ

ದೇವಾಲಯಕ್ಕೆ ಬಂದ ಕಿಡಿಗೇಡಿಗಳು, ದೇವರಿಗೆ ಹಾರ ಹಾಕಿ ಎಂದು ಪ್ಲಾಸ್ಟಿಕ್ ಪೇಪರ್​ ಒಳಗೊಂಡ ಹಾರದಲ್ಲಿ (ಹಾರದ ದಿಂಡಿನೊಳಗೆ ) ಮಾಂಸದ ತುಂಡು ಇಟ್ಟು ಸಿಬ್ಬಂದಿಗೆ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತಾಲೂಕಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನದಲ್ಲಿ ಕಳೆದ 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದೇವಾಲಯಕ್ಕೆ ಬಂದ ಕಿಡಿಗೇಡಿಗಳು, ದೇವರಿಗೆ ಹಾರ ಹಾಕಿ ಎಂದು ಪ್ಲಾಸ್ಟಿಕ್ ಪೇಪರ್ ಒಳಗೊಂಡ ಹಾರದಲ್ಲಿ      (ಹಾರದ ದಿಂಡಿನೊಳಗೆ) ಮಾಂಸದ ತುಂಡು ಇಟ್ಟು ಸಿಬ್ಬಂದಿಗೆ ನೀಡಿರುವ ಘಟನೆ ನಡೆದಿದೆ.

ಕಳೆದ ಹದಿನೈದು ದಿನಗಳ ಹಿಂದೆ ತಾಲೂಕಿನ ಕನಸವಾಡಿಯ ಶ್ರೀ ಶನಿಮಹಾತ್ಮಾ ದೇವಾಲಯಕ್ಕೆ‌‌ ಬಂದ ಇಬ್ಬರು ಅಪರಿಚಿತ ಯುವಕರಿಂದ ಕೃತ್ಯ ನಡೆದಿದ್ದು, ಕಿಡಿಗೇಡಿಗಳ ವಿರುದ್ಧ ದೊಡ್ಡಬೆಳವಂಗಲ‌ ಪೊಲೀಸ್ ಠಾಣೆಗೆ ದೇವಾಲಯದ ಸಿಬ್ಬಂದಿ ದೂರು ನೀಡಿದ್ದಾರೆ.

ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಇಬ್ಬರು ಯುವಕರು ಬಂದಿದ್ದಾರೆ. ದೇವರಿಗೆ ಹಾಕಿ ಎಂದು ಹೂವಿನ ಹಾರದ ಮಧ್ಯೆ ಬರುವ ಪ್ಲಾಸ್ಟಿಕ್ ಪೇಪರ್ ಒಳಗಡೆ (ದಿಂಡು) ಮಾಂಸವಿಟ್ಟು ದೇವಸ್ಥಾನದ ಸಿಬ್ಬಂದಿಗೆ ನೀಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕವರ್ ತೆಗೆದುಕೊಂಡ ಸಿಬ್ಬಂದಿ, ದೇವರಿಗೆ ಹಾರ ಹಾಕಲೆಂದು ಗರ್ಭಗುಡಿಯೊಳಗೆ ಹೋಗವಾಗ, ಮಾಂಸದ ತುಂಡು ಹಾರದಿಂದ​ ಕೆಳಗೆ ಬಿದ್ದಿದೆ. ಕೂಡಲೇ ದೇವಸ್ಥಾನದ ಸಿಬ್ಬಂದಿ ಕವರ್​ ಹೊರಗೆ ಎಸೆದಿದ್ದಾರೆ.

ಇನ್ನು ಈ ಕೃತ್ಯಕ್ಕೆ ಕಾರಣರಾದ ಕಿಡಿಗೇಡಿಗಳು ದೇವಸ್ಥಾನಕ್ಕೆ ಬಂದು ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ದೇವಾಲಯದ ಸಿಬ್ಬಂದಿ ದೊಡ್ಡಬೆಳವಂಗಲ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆಡಳಿತ ಮಂಡಳಿ ದೇವಸ್ಥಾನದಲ್ಲಿ ಪೇಪರ್ ದಿಂಡು ಒಳಗೊಂಡ ಹಾರಗಳನ್ನು ನಿಷೇಧಿಸಿದೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago