ಬೆಂಗಳೂರಿನ ಅಣ್ಣಮ್ಮ ದೇವಿ, ತ್ಯಾಮಗೊಂಡ್ಲುವಿನ ಬಿದಲೂರು ಗಂಗಮ್ಮ, ಬೂದಿಹಾಳದ ಮಾರಮ್ಮ, ಹೆಸರುಘಟ್ಟದ ದುಗ್ಲಮ್ಮ ಸೇರಿದಂತೆ ಮಧುರೆ ಹೋಬಳಿಯ ವಿವಿಧ ಗ್ರಾಮಗಳ ದೇವತೆಗಳನ್ನು ಒಂದೆಡೆಯಲ್ಲಿ ಆರಾಧಿಸುವ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಫೆ.26ರ ಶನೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಈ ವಿಶೇಷ ಶಕ್ತಿ ದೇವತೆಗಳ ಆರಾಧನೆಯನ್ನು ಹಮ್ಮಿಕೊಳ್ಳಲಾಗಿದೆ.
101 ಶಕ್ತಿ ದೇವತೆಗಳ ಆರಾಧನೆಯಲ್ಲಿ ಇಂದಿನಿಂದ ದಿನವಿಡಿ ವಿಶೇಷ ಧಾರ್ಮಿಕ ಆಚರಣೆಗಳು ನಡೆಯಲಿದೆ. ಬೆಂಗಳೂರಿನ ಅಣ್ಣಮ್ಮ ದೇವಿ ವಿಶೇಷ ಆಕರ್ಷಣೆ ಆಗಿದೆ.
ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ. 25 ರಿಂದ 30 ಸಾವಿರ ಜನರಿಗೆ ಭೋಜನ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ಶನೇಶ್ವರ ದೇವಾಲಯದಿಂದ ಕನಸವಾಡಿ ಮುಖ್ಯ ರಸ್ತೆಯಲ್ಲಿ ಶನೇಶ್ವರ ದೇವರ ಸಮೇತವಾಗಿ 101 ದೇವರ ಉತ್ಸವವನ್ನು ವಿಶೇಷ ಕಲಾತಂಡದೊಂದಿಗೆ ಕರೆದೊಯ್ಯಲಾಗುತ್ತದೆ. ಈ ಧಾರ್ಮಿಕ ಆಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಾಂಸ್ಕೃತಿಕ ಮೆರಗು
ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ ವಿಶೇಷ ಸಾಂಸ್ಕೃತಿ ಕಾರ್ಯಕ್ರಮವನ್ನು ಕೂಡ ಮಾರ್ಚ್ 1ರ ಸಂಜೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನಲೆ ಗಾಯಕ ಹೇಮಂತ್ ಅವರ ತಂಡದ ವತಿಯಿಂದ ಸಂಗೀತ ಸಂಭ್ರಮೋತ್ಸವ ಕಾರ್ಯಕ್ರಮ ನಡೆಯಲಿದೆ.
ಜತೆಗೆ ತುಮಕೂರಿನ ಫೈರ್ ವರ್ಕ್ ತಂಡದಿಂದ ಒಂದು ಗಂಟೆಗಳ ಕಾಲ ವಿಶೇಷ ಸಿಡಿಮದ್ದು ಪ್ರದರ್ಶನ ನಡೆಯಲಿದೆ ಹಾಗೂ ರವೀಂದ್ರ ಕಲಾ ಕ್ಷೇತ್ರದ ಖ್ಯಾತ ಮಹಿಳಾ ತಂಡದಿಂದ ಕುರುಕ್ಷೇತ್ರ ನಾಟಕ ಕೂಡ ಹಮ್ಮಿಕೊಳ್ಳಲಾಗಿದೆ. ಜೊತೆಗೆ ತಮಟೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಇದು ಪಕ್ಷಾತೀತವಾಗಿ ನಡೆಯುವಂತಹ ಕಾರ್ಯಕ್ರಮ ಹೆಚ್ಚಿನ ಸಂಖ್ಯೆಯ ಭಕ್ತಾಧಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ದೇವಾಲಯದ ಪ್ರಕಾಶ್ ತಿಳಿಸಿದ್ದಾರೆ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…