ಶನೇಶ್ವರ ಜಾತ್ರಾ ಮಹೋತ್ಸವ: ಮಾರ್ಚ್ 1ರಂದು ವಿಶೇಷ ಧಾರ್ಮಿಕ ಆಚರಣೆ: 101 ಶಕ್ತಿ ದೇವತೆಗಳ ಆರಾಧನೆ

ಬೆಂಗಳೂರಿನ ಅಣ್ಣಮ್ಮ ದೇವಿ, ತ್ಯಾಮಗೊಂಡ್ಲುವಿನ ಬಿದಲೂರು ಗಂಗಮ್ಮ, ಬೂದಿಹಾಳದ ಮಾರಮ್ಮ, ಹೆಸರುಘಟ್ಟದ ದುಗ್ಲಮ್ಮ ಸೇರಿದಂತೆ ಮಧುರೆ ಹೋಬಳಿಯ ವಿವಿಧ ಗ್ರಾಮಗಳ ದೇವತೆಗಳನ್ನು ಒಂದೆಡೆಯಲ್ಲಿ ಆರಾಧಿಸುವ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಫೆ.26ರ ಶನೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಈ ವಿಶೇಷ ಶಕ್ತಿ ದೇವತೆಗಳ ಆರಾಧನೆಯನ್ನು ಹಮ್ಮಿಕೊಳ್ಳಲಾಗಿದೆ.

101 ಶಕ್ತಿ ದೇವತೆಗಳ ಆರಾಧನೆಯಲ್ಲಿ ಮಾರ್ಚ್ 1ರ ಬೆಳಗ್ಗೆ 10 ಗಂಟೆಯಿಂದ ದಿನವಿಡಿ ವಿಶೇಷ ಧಾರ್ಮಿಕ ಆಚರಣೆಗಳು ನಡೆಯಲಿದೆ. ಬೆಂಗಳೂರಿನ ಅಣ್ಣಮ್ಮ ದೇವಿ ವಿಶೇಷ ಆಕರ್ಷಣೆ ಆಗಿದೆ.

ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಸಾಧ್ಯತೆಯಿದ್ದು, 25 ರಿಂದ 30,000 ಜನರಿಗೆ ಭೋಜನ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

ಶನೇಶ್ವರ ದೇವಾಲಯದಿಂದ ಕನಸವಾಡಿ ಮುಖ್ಯ ರಸ್ತೆಯಲ್ಲಿ ಶನೇಶ್ವರ ದೇವರ ಸಮೇತವಾಗಿ 101 ದೇವರ ಉತ್ಸವವನ್ನು ವಿಶೇಷ ಕಲಾತಂಡದೊಂದಿಗೆ ಕರೆದೊಯ್ಯಲಾಗುತ್ತದೆ. ಈ ಧಾರ್ಮಿಕ ಆಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಾಂಸ್ಕೃತಿಕ ಮೆರಗು

ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ ವಿಶೇಷ ಸಾಂಸ್ಕೃತಿ ಕಾರ್ಯಕ್ರಮವನ್ನು ಕೂಡ ಮಾರ್ಚ್ 1ರ ಸಂಜೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನಲೆ ಗಾಯಕ ಹೇಮಂತ್ ಅವರ ತಂಡದ ವತಿಯಿಂದ ಸಂಗೀತ ಸಂಭ್ರಮೋತ್ಸವ ಕಾರ್ಯಕ್ರಮ ನಡೆಯಲಿದೆ.

ಜತೆಗೆ ತುಮಕೂರಿನ ಫೈರ್ ವರ್ಕ್ ತಂಡದಿಂದ ಒಂದು ಗಂಟೆಗಳ ಕಾಲ ವಿಶೇಷ ಸಿಡಿಮದ್ದು ಪ್ರದರ್ಶನ ನಡೆಯಲಿದೆ ಹಾಗೂ ರವೀಂದ್ರ ಕಲಾ ಕ್ಷೇತ್ರದ ಖ್ಯಾತ ಮಹಿಳಾ ತಂಡದಿಂದ ಕುರುಕ್ಷೇತ್ರ ನಾಟಕ ಕೂಡ ಹಮ್ಮಿಕೊಳ್ಳಲಾಗಿದೆ. ಜೊತೆಗೆ ತಮಟೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಪಕ್ಷಾತೀತವಾಗಿ ಕಾರ್ಯಕ್ರಮಗಳನ್ನು ನೆರವೇರಿಸಿಕೊಡಲಾಗುವುದು ಎಂದು ಕನಸವಾಡಿ ವಿಎಸ್ ಎಸ್ ಎನ್ ಉಪಾಧ್ಯಕ್ಷ ಟಿ.ಮಂಜುನಾಥ ತಿಳಿಸಿದ್ದಾರೆ…

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

16 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

20 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

23 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago