ಶನೇಶ್ವರ ಜಾತ್ರಾ ಮಹೋತ್ಸವ: ಮಾರ್ಚ್ 1ರಂದು ವಿಶೇಷ ಧಾರ್ಮಿಕ ಆಚರಣೆ: 101 ಶಕ್ತಿ ದೇವತೆಗಳ ಆರಾಧನೆ

ಬೆಂಗಳೂರಿನ ಅಣ್ಣಮ್ಮ ದೇವಿ, ತ್ಯಾಮಗೊಂಡ್ಲುವಿನ ಬಿದಲೂರು ಗಂಗಮ್ಮ, ಬೂದಿಹಾಳದ ಮಾರಮ್ಮ, ಹೆಸರುಘಟ್ಟದ ದುಗ್ಲಮ್ಮ ಸೇರಿದಂತೆ ಮಧುರೆ ಹೋಬಳಿಯ ವಿವಿಧ ಗ್ರಾಮಗಳ ದೇವತೆಗಳನ್ನು ಒಂದೆಡೆಯಲ್ಲಿ ಆರಾಧಿಸುವ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಫೆ.26ರ ಶನೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಈ ವಿಶೇಷ ಶಕ್ತಿ ದೇವತೆಗಳ ಆರಾಧನೆಯನ್ನು ಹಮ್ಮಿಕೊಳ್ಳಲಾಗಿದೆ.

101 ಶಕ್ತಿ ದೇವತೆಗಳ ಆರಾಧನೆಯಲ್ಲಿ ಮಾರ್ಚ್ 1ರ ಬೆಳಗ್ಗೆ 10 ಗಂಟೆಯಿಂದ ದಿನವಿಡಿ ವಿಶೇಷ ಧಾರ್ಮಿಕ ಆಚರಣೆಗಳು ನಡೆಯಲಿದೆ. ಬೆಂಗಳೂರಿನ ಅಣ್ಣಮ್ಮ ದೇವಿ ವಿಶೇಷ ಆಕರ್ಷಣೆ ಆಗಿದೆ.

ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಸಾಧ್ಯತೆಯಿದ್ದು, 25 ರಿಂದ 30,000 ಜನರಿಗೆ ಭೋಜನ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

ಶನೇಶ್ವರ ದೇವಾಲಯದಿಂದ ಕನಸವಾಡಿ ಮುಖ್ಯ ರಸ್ತೆಯಲ್ಲಿ ಶನೇಶ್ವರ ದೇವರ ಸಮೇತವಾಗಿ 101 ದೇವರ ಉತ್ಸವವನ್ನು ವಿಶೇಷ ಕಲಾತಂಡದೊಂದಿಗೆ ಕರೆದೊಯ್ಯಲಾಗುತ್ತದೆ. ಈ ಧಾರ್ಮಿಕ ಆಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಾಂಸ್ಕೃತಿಕ ಮೆರಗು

ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ ವಿಶೇಷ ಸಾಂಸ್ಕೃತಿ ಕಾರ್ಯಕ್ರಮವನ್ನು ಕೂಡ ಮಾರ್ಚ್ 1ರ ಸಂಜೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನಲೆ ಗಾಯಕ ಹೇಮಂತ್ ಅವರ ತಂಡದ ವತಿಯಿಂದ ಸಂಗೀತ ಸಂಭ್ರಮೋತ್ಸವ ಕಾರ್ಯಕ್ರಮ ನಡೆಯಲಿದೆ.

ಜತೆಗೆ ತುಮಕೂರಿನ ಫೈರ್ ವರ್ಕ್ ತಂಡದಿಂದ ಒಂದು ಗಂಟೆಗಳ ಕಾಲ ವಿಶೇಷ ಸಿಡಿಮದ್ದು ಪ್ರದರ್ಶನ ನಡೆಯಲಿದೆ ಹಾಗೂ ರವೀಂದ್ರ ಕಲಾ ಕ್ಷೇತ್ರದ ಖ್ಯಾತ ಮಹಿಳಾ ತಂಡದಿಂದ ಕುರುಕ್ಷೇತ್ರ ನಾಟಕ ಕೂಡ ಹಮ್ಮಿಕೊಳ್ಳಲಾಗಿದೆ. ಜೊತೆಗೆ ತಮಟೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಪಕ್ಷಾತೀತವಾಗಿ ಕಾರ್ಯಕ್ರಮಗಳನ್ನು ನೆರವೇರಿಸಿಕೊಡಲಾಗುವುದು ಎಂದು ಕನಸವಾಡಿ ವಿಎಸ್ ಎಸ್ ಎನ್ ಉಪಾಧ್ಯಕ್ಷ ಟಿ.ಮಂಜುನಾಥ ತಿಳಿಸಿದ್ದಾರೆ…

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

6 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

21 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago