ಬೆಂಗಳೂರಿನ ಅಣ್ಣಮ್ಮ ದೇವಿ, ತ್ಯಾಮಗೊಂಡ್ಲುವಿನ ಬಿದಲೂರು ಗಂಗಮ್ಮ, ಬೂದಿಹಾಳದ ಮಾರಮ್ಮ, ಹೆಸರುಘಟ್ಟದ ದುಗ್ಲಮ್ಮ ಸೇರಿದಂತೆ ಮಧುರೆ ಹೋಬಳಿಯ ವಿವಿಧ ಗ್ರಾಮಗಳ ದೇವತೆಗಳನ್ನು ಒಂದೆಡೆಯಲ್ಲಿ ಆರಾಧಿಸುವ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಫೆ.26ರ ಶನೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಈ ವಿಶೇಷ ಶಕ್ತಿ ದೇವತೆಗಳ ಆರಾಧನೆಯನ್ನು ಹಮ್ಮಿಕೊಳ್ಳಲಾಗಿದೆ.
101 ಶಕ್ತಿ ದೇವತೆಗಳ ಆರಾಧನೆಯಲ್ಲಿ ಮಾರ್ಚ್ 1ರ ಬೆಳಗ್ಗೆ 10 ಗಂಟೆಯಿಂದ ದಿನವಿಡಿ ವಿಶೇಷ ಧಾರ್ಮಿಕ ಆಚರಣೆಗಳು ನಡೆಯಲಿದೆ. ಬೆಂಗಳೂರಿನ ಅಣ್ಣಮ್ಮ ದೇವಿ ವಿಶೇಷ ಆಕರ್ಷಣೆ ಆಗಿದೆ.
ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಸಾಧ್ಯತೆಯಿದ್ದು, 25 ರಿಂದ 30,000 ಜನರಿಗೆ ಭೋಜನ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ಶನೇಶ್ವರ ದೇವಾಲಯದಿಂದ ಕನಸವಾಡಿ ಮುಖ್ಯ ರಸ್ತೆಯಲ್ಲಿ ಶನೇಶ್ವರ ದೇವರ ಸಮೇತವಾಗಿ 101 ದೇವರ ಉತ್ಸವವನ್ನು ವಿಶೇಷ ಕಲಾತಂಡದೊಂದಿಗೆ ಕರೆದೊಯ್ಯಲಾಗುತ್ತದೆ. ಈ ಧಾರ್ಮಿಕ ಆಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಾಂಸ್ಕೃತಿಕ ಮೆರಗು
ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ ವಿಶೇಷ ಸಾಂಸ್ಕೃತಿ ಕಾರ್ಯಕ್ರಮವನ್ನು ಕೂಡ ಮಾರ್ಚ್ 1ರ ಸಂಜೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನಲೆ ಗಾಯಕ ಹೇಮಂತ್ ಅವರ ತಂಡದ ವತಿಯಿಂದ ಸಂಗೀತ ಸಂಭ್ರಮೋತ್ಸವ ಕಾರ್ಯಕ್ರಮ ನಡೆಯಲಿದೆ.
ಜತೆಗೆ ತುಮಕೂರಿನ ಫೈರ್ ವರ್ಕ್ ತಂಡದಿಂದ ಒಂದು ಗಂಟೆಗಳ ಕಾಲ ವಿಶೇಷ ಸಿಡಿಮದ್ದು ಪ್ರದರ್ಶನ ನಡೆಯಲಿದೆ ಹಾಗೂ ರವೀಂದ್ರ ಕಲಾ ಕ್ಷೇತ್ರದ ಖ್ಯಾತ ಮಹಿಳಾ ತಂಡದಿಂದ ಕುರುಕ್ಷೇತ್ರ ನಾಟಕ ಕೂಡ ಹಮ್ಮಿಕೊಳ್ಳಲಾಗಿದೆ. ಜೊತೆಗೆ ತಮಟೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಪಕ್ಷಾತೀತವಾಗಿ ಕಾರ್ಯಕ್ರಮಗಳನ್ನು ನೆರವೇರಿಸಿಕೊಡಲಾಗುವುದು ಎಂದು ಕನಸವಾಡಿ ವಿಎಸ್ ಎಸ್ ಎನ್ ಉಪಾಧ್ಯಕ್ಷ ಟಿ.ಮಂಜುನಾಥ ತಿಳಿಸಿದ್ದಾರೆ…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…