ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು ಹೊರಟ “ಬಸಪ್ಪ”

ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು “ಬಸಪ್ಪ” ಎಂದೇ ಹೆಸರು ಪಡೆದಿರುವ ಎತ್ತು ಡಿ.22ರ  ಭಾನುವಾರದಂದು ಪಯಣ ಬೆಳೆಸಿತು.

ಇತ್ತೀಚೆಗೆ ಈ ಬಸಪ್ಪ ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ರಾಮನ ದರ್ಶನ ಪಡೆದು ಬಂದಿತ್ತು. ಇದೀಗ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು ಪಯಣ ಬೆಳೆಸಿದೆ.

ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿದೆ. ಬಸಪ್ಪನಿಗೆ ಅಯ್ಯಪ್ಪ ಸ್ವಾಮಿ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದು, ಈಗಾಗಲೇ ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ.

ನಿನ್ನೆ (ಡಿ.22) ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಾಸುದೇವಾ ಚಾರ್ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ಭಜನೆ ಹಾಗೂ ಇತರೆ ಎಲ್ಲಾ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಬಸಪ್ಪನ ಯಾತ್ರೆಗೆ ಚಾಲನೆ ನೀಡಲಾಯಿತು.

ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ವಾಸುದೇವಾ ಚಾರ್, ಇದೇ ಮೊದಲ ಬಾರಿಗೆ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ‌ ಎಂಬ ಹೆಸರಿನಲ್ಲಿರುವ ಎತ್ತು ಹೊರಟಿತ್ತು. ಇದೀಗ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ದರ್ಶನ ಪಡೆಯಲು ಹೊರಟಿದೆ. ಪಂಪಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ಅಯ್ಯಪ್ಪ ದರ್ಶನ ಮಾಡಿಸಲಾಗುವುದು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.

ಅಯ್ಯಪ್ಪ ದರ್ಶನ ನಂತರ ಮಾರ್ಗ ಮಾಧ್ಯ ಬರುವಂತಹ ಎಲ್ಲಾ ದೇವರ ದರ್ಶನ ಮಾಡಿಸಲಾಗುವುದು ಎಂದು ಹೇಳಿದರು.

ಇದಾದನಂತರ ಮುಂದಿನ ತೀರ್ಥಯಾತ್ರೆ ತಮಿಳುನಾಡಿನ ರಾಮೇಶ್ವರಂನತ್ತ ಹೊರಡಲಿದೆ. ಇದಕ್ಕೆ ಎಲ್ಲಾ ಸಿದ್ಧತೆ ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago