ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ….!

ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಪ್ರಕರಣಗಳು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ
ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.

1. ನೇಗ್ಲೇರಿಯಾ ಫೌಲೇರಿ (Naegleria fowlen) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು.

2. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ

3. ನೇಗ್ಲೇರಿಯಾ ಫೌಲರಿ (Naegleria fowleri) ಅತ್ಯಂತ ವಿಷಕಾರಿ (virulent) ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.

ಆದ್ದರಿಂದ ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.

4. ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು. ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ (behavioural disorders) ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 minutes ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

2 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

2 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

13 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

14 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago