Categories: ರಾಜ್ಯ

‘ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು’- ಸಿಎಂ ಸಿದ್ದರಾಮಯ್ಯ

ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳವನ್ನು ಉದ್ಘಾಟಿಸಿ, ಅವರು ಮಾತನಾಡಿದರು

ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ರೂಪಿಸಿದರು. ಇದನ್ನು ಮಾಡಿದ್ದು ದೇವರಲ್ಲ ಎಂದು ತಿಳಿಸಿದರು.

ಬಹು ಸಂಖ್ಯಾತರನ್ನು  ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆಯನ್ನು ಮಾಡಿದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಡ್ಯವನ್ನು ತೊಡೆದು ಹಾಕಿತು. ಹಣೆ ಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದನ್ನು  ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದ್ದರು ಎಂದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಾದಿ ಶರಣರು ಪ್ರತಿಪಾದಿಸಿದರು. ಧರ್ಮ ತಾರತಮ್ಯ ಮಾಡಬೇಡಿ, ಮನುಷ್ಯ ಮನುಷ್ಯನನ್ನು ದ್ವೇಷಿಸುವುದನ್ನು ಬಸವಾದಿ ಶರಣರು ವಿರೋಧಿಸಿದ್ದರು. ಈ ಕಾರಣಕ್ಕೇ ಇವ ನಮ್ಮವ, ಇವ ನಮ್ಮವ ಎನ್ನುವ ಉದಾತ್ತವಾದ ಮೌಲ್ಯವನ್ನು 800 ವರ್ಷಗಳ ಹಿಂದೆಯೇ ಹೇಳಿದರು. ಹೀಗಾಗಿ ಜಾತಿ ವ್ಯವಸ್ಥೆಯನ್ನು ಶರಣರೇ ಹೋಗಲಾಡಿಸಬೇಕು ಎಂದು ಹೇಳಿದರು.

ಜಾತಿ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು. ಜಾತಿ, ವರ್ಗ, ಅಂತಸ್ತನ್ನು ಸೋಕಿಸಿಕೊಳ್ಳದೆ ಇರುವವರು ಮಾತ್ರ ನಿಜ ಶರಣರು. ಪಟ್ಟಭದ್ರ ಹಿತಾಸಕ್ತಿಗಳು ಇರುವುದು ಬಹಳ ಕಡಿಮೆ ಜನ. ಆದರೆ ಇವರು ಸ್ಟ್ರಾಂಗ್ ಇದ್ದಾರೆ. ಆದರೆ, ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು ಎಂದು ತಿಳಿಸಿದರು.

ಈ ವೇಳೆ ಬಸವಧರ್ಮ ಪೀಠದ ಪೀಠಾಧ್ಯಕ್ಷರಾದ ಶ್ರೀಮನ್ನಿರಂಜನ ಮಹಾ ಜಗದ್ಗುರು ಡಾ.ಮಾತೆ ಗಂಗಾದೇವಿಯವರು, ಪೀಠದ ಉಪಾದ್ಯಕ್ಷರಾದ ಮಹದೇಶ್ವರ ಸ್ವಾಮೀಜಿ, ಕುಂಬಳಗೋಡಿನ ವಿಶ್ವಕಲ್ಯಾಣ ಮಿಷನ್ ನ ಬಸವಯೋಗಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಶರಣ ವಿಜಯಾನಂದ ಕಾಶಪ್ಪನವರ್, ಸಚಿವರಾದ ಬೈರತಿ ಸುರೇಶ್, ತಿಮ್ಮಾಪುರ, ಶಾಸಕರಾದ ಎಂ.ನರೇಂದ್ರ ಸ್ವಾಮಿ, ಎಚ್.ವೈ.ಮೇಠಿ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

11 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

18 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

21 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

21 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago