Categories: ರಾಜ್ಯ

‘ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು’- ಸಿಎಂ ಸಿದ್ದರಾಮಯ್ಯ

ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳವನ್ನು ಉದ್ಘಾಟಿಸಿ, ಅವರು ಮಾತನಾಡಿದರು

ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ರೂಪಿಸಿದರು. ಇದನ್ನು ಮಾಡಿದ್ದು ದೇವರಲ್ಲ ಎಂದು ತಿಳಿಸಿದರು.

ಬಹು ಸಂಖ್ಯಾತರನ್ನು  ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆಯನ್ನು ಮಾಡಿದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಡ್ಯವನ್ನು ತೊಡೆದು ಹಾಕಿತು. ಹಣೆ ಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದನ್ನು  ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದ್ದರು ಎಂದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಾದಿ ಶರಣರು ಪ್ರತಿಪಾದಿಸಿದರು. ಧರ್ಮ ತಾರತಮ್ಯ ಮಾಡಬೇಡಿ, ಮನುಷ್ಯ ಮನುಷ್ಯನನ್ನು ದ್ವೇಷಿಸುವುದನ್ನು ಬಸವಾದಿ ಶರಣರು ವಿರೋಧಿಸಿದ್ದರು. ಈ ಕಾರಣಕ್ಕೇ ಇವ ನಮ್ಮವ, ಇವ ನಮ್ಮವ ಎನ್ನುವ ಉದಾತ್ತವಾದ ಮೌಲ್ಯವನ್ನು 800 ವರ್ಷಗಳ ಹಿಂದೆಯೇ ಹೇಳಿದರು. ಹೀಗಾಗಿ ಜಾತಿ ವ್ಯವಸ್ಥೆಯನ್ನು ಶರಣರೇ ಹೋಗಲಾಡಿಸಬೇಕು ಎಂದು ಹೇಳಿದರು.

ಜಾತಿ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು. ಜಾತಿ, ವರ್ಗ, ಅಂತಸ್ತನ್ನು ಸೋಕಿಸಿಕೊಳ್ಳದೆ ಇರುವವರು ಮಾತ್ರ ನಿಜ ಶರಣರು. ಪಟ್ಟಭದ್ರ ಹಿತಾಸಕ್ತಿಗಳು ಇರುವುದು ಬಹಳ ಕಡಿಮೆ ಜನ. ಆದರೆ ಇವರು ಸ್ಟ್ರಾಂಗ್ ಇದ್ದಾರೆ. ಆದರೆ, ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು ಎಂದು ತಿಳಿಸಿದರು.

ಈ ವೇಳೆ ಬಸವಧರ್ಮ ಪೀಠದ ಪೀಠಾಧ್ಯಕ್ಷರಾದ ಶ್ರೀಮನ್ನಿರಂಜನ ಮಹಾ ಜಗದ್ಗುರು ಡಾ.ಮಾತೆ ಗಂಗಾದೇವಿಯವರು, ಪೀಠದ ಉಪಾದ್ಯಕ್ಷರಾದ ಮಹದೇಶ್ವರ ಸ್ವಾಮೀಜಿ, ಕುಂಬಳಗೋಡಿನ ವಿಶ್ವಕಲ್ಯಾಣ ಮಿಷನ್ ನ ಬಸವಯೋಗಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಶರಣ ವಿಜಯಾನಂದ ಕಾಶಪ್ಪನವರ್, ಸಚಿವರಾದ ಬೈರತಿ ಸುರೇಶ್, ತಿಮ್ಮಾಪುರ, ಶಾಸಕರಾದ ಎಂ.ನರೇಂದ್ರ ಸ್ವಾಮಿ, ಎಚ್.ವೈ.ಮೇಠಿ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

9 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

10 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

10 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

11 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

14 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

14 hours ago