ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳವನ್ನು ಉದ್ಘಾಟಿಸಿ, ಅವರು ಮಾತನಾಡಿದರು
ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ರೂಪಿಸಿದರು. ಇದನ್ನು ಮಾಡಿದ್ದು ದೇವರಲ್ಲ ಎಂದು ತಿಳಿಸಿದರು.
ಬಹು ಸಂಖ್ಯಾತರನ್ನು ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆಯನ್ನು ಮಾಡಿದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಡ್ಯವನ್ನು ತೊಡೆದು ಹಾಕಿತು. ಹಣೆ ಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದನ್ನು ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದ್ದರು ಎಂದರು.
ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಾದಿ ಶರಣರು ಪ್ರತಿಪಾದಿಸಿದರು. ಧರ್ಮ ತಾರತಮ್ಯ ಮಾಡಬೇಡಿ, ಮನುಷ್ಯ ಮನುಷ್ಯನನ್ನು ದ್ವೇಷಿಸುವುದನ್ನು ಬಸವಾದಿ ಶರಣರು ವಿರೋಧಿಸಿದ್ದರು. ಈ ಕಾರಣಕ್ಕೇ ಇವ ನಮ್ಮವ, ಇವ ನಮ್ಮವ ಎನ್ನುವ ಉದಾತ್ತವಾದ ಮೌಲ್ಯವನ್ನು 800 ವರ್ಷಗಳ ಹಿಂದೆಯೇ ಹೇಳಿದರು. ಹೀಗಾಗಿ ಜಾತಿ ವ್ಯವಸ್ಥೆಯನ್ನು ಶರಣರೇ ಹೋಗಲಾಡಿಸಬೇಕು ಎಂದು ಹೇಳಿದರು.
ಜಾತಿ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು. ಜಾತಿ, ವರ್ಗ, ಅಂತಸ್ತನ್ನು ಸೋಕಿಸಿಕೊಳ್ಳದೆ ಇರುವವರು ಮಾತ್ರ ನಿಜ ಶರಣರು. ಪಟ್ಟಭದ್ರ ಹಿತಾಸಕ್ತಿಗಳು ಇರುವುದು ಬಹಳ ಕಡಿಮೆ ಜನ. ಆದರೆ ಇವರು ಸ್ಟ್ರಾಂಗ್ ಇದ್ದಾರೆ. ಆದರೆ, ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು ಎಂದು ತಿಳಿಸಿದರು.
ಈ ವೇಳೆ ಬಸವಧರ್ಮ ಪೀಠದ ಪೀಠಾಧ್ಯಕ್ಷರಾದ ಶ್ರೀಮನ್ನಿರಂಜನ ಮಹಾ ಜಗದ್ಗುರು ಡಾ.ಮಾತೆ ಗಂಗಾದೇವಿಯವರು, ಪೀಠದ ಉಪಾದ್ಯಕ್ಷರಾದ ಮಹದೇಶ್ವರ ಸ್ವಾಮೀಜಿ, ಕುಂಬಳಗೋಡಿನ ವಿಶ್ವಕಲ್ಯಾಣ ಮಿಷನ್ ನ ಬಸವಯೋಗಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಶರಣ ವಿಜಯಾನಂದ ಕಾಶಪ್ಪನವರ್, ಸಚಿವರಾದ ಬೈರತಿ ಸುರೇಶ್, ತಿಮ್ಮಾಪುರ, ಶಾಸಕರಾದ ಎಂ.ನರೇಂದ್ರ ಸ್ವಾಮಿ, ಎಚ್.ವೈ.ಮೇಠಿ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…