ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳವನ್ನು ಉದ್ಘಾಟಿಸಿ, ಅವರು ಮಾತನಾಡಿದರು
ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ರೂಪಿಸಿದರು. ಇದನ್ನು ಮಾಡಿದ್ದು ದೇವರಲ್ಲ ಎಂದು ತಿಳಿಸಿದರು.
ಬಹು ಸಂಖ್ಯಾತರನ್ನು ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆಯನ್ನು ಮಾಡಿದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಡ್ಯವನ್ನು ತೊಡೆದು ಹಾಕಿತು. ಹಣೆ ಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದನ್ನು ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದ್ದರು ಎಂದರು.
ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಾದಿ ಶರಣರು ಪ್ರತಿಪಾದಿಸಿದರು. ಧರ್ಮ ತಾರತಮ್ಯ ಮಾಡಬೇಡಿ, ಮನುಷ್ಯ ಮನುಷ್ಯನನ್ನು ದ್ವೇಷಿಸುವುದನ್ನು ಬಸವಾದಿ ಶರಣರು ವಿರೋಧಿಸಿದ್ದರು. ಈ ಕಾರಣಕ್ಕೇ ಇವ ನಮ್ಮವ, ಇವ ನಮ್ಮವ ಎನ್ನುವ ಉದಾತ್ತವಾದ ಮೌಲ್ಯವನ್ನು 800 ವರ್ಷಗಳ ಹಿಂದೆಯೇ ಹೇಳಿದರು. ಹೀಗಾಗಿ ಜಾತಿ ವ್ಯವಸ್ಥೆಯನ್ನು ಶರಣರೇ ಹೋಗಲಾಡಿಸಬೇಕು ಎಂದು ಹೇಳಿದರು.
ಜಾತಿ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು. ಜಾತಿ, ವರ್ಗ, ಅಂತಸ್ತನ್ನು ಸೋಕಿಸಿಕೊಳ್ಳದೆ ಇರುವವರು ಮಾತ್ರ ನಿಜ ಶರಣರು. ಪಟ್ಟಭದ್ರ ಹಿತಾಸಕ್ತಿಗಳು ಇರುವುದು ಬಹಳ ಕಡಿಮೆ ಜನ. ಆದರೆ ಇವರು ಸ್ಟ್ರಾಂಗ್ ಇದ್ದಾರೆ. ಆದರೆ, ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು ಎಂದು ತಿಳಿಸಿದರು.
ಈ ವೇಳೆ ಬಸವಧರ್ಮ ಪೀಠದ ಪೀಠಾಧ್ಯಕ್ಷರಾದ ಶ್ರೀಮನ್ನಿರಂಜನ ಮಹಾ ಜಗದ್ಗುರು ಡಾ.ಮಾತೆ ಗಂಗಾದೇವಿಯವರು, ಪೀಠದ ಉಪಾದ್ಯಕ್ಷರಾದ ಮಹದೇಶ್ವರ ಸ್ವಾಮೀಜಿ, ಕುಂಬಳಗೋಡಿನ ವಿಶ್ವಕಲ್ಯಾಣ ಮಿಷನ್ ನ ಬಸವಯೋಗಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಶರಣ ವಿಜಯಾನಂದ ಕಾಶಪ್ಪನವರ್, ಸಚಿವರಾದ ಬೈರತಿ ಸುರೇಶ್, ತಿಮ್ಮಾಪುರ, ಶಾಸಕರಾದ ಎಂ.ನರೇಂದ್ರ ಸ್ವಾಮಿ, ಎಚ್.ವೈ.ಮೇಠಿ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…