Categories: ರಾಜ್ಯ

‘ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು’- ಸಿಎಂ ಸಿದ್ದರಾಮಯ್ಯ

ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳವನ್ನು ಉದ್ಘಾಟಿಸಿ, ಅವರು ಮಾತನಾಡಿದರು

ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ರೂಪಿಸಿದರು. ಇದನ್ನು ಮಾಡಿದ್ದು ದೇವರಲ್ಲ ಎಂದು ತಿಳಿಸಿದರು.

ಬಹು ಸಂಖ್ಯಾತರನ್ನು  ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆಯನ್ನು ಮಾಡಿದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಡ್ಯವನ್ನು ತೊಡೆದು ಹಾಕಿತು. ಹಣೆ ಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದನ್ನು  ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದ್ದರು ಎಂದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಾದಿ ಶರಣರು ಪ್ರತಿಪಾದಿಸಿದರು. ಧರ್ಮ ತಾರತಮ್ಯ ಮಾಡಬೇಡಿ, ಮನುಷ್ಯ ಮನುಷ್ಯನನ್ನು ದ್ವೇಷಿಸುವುದನ್ನು ಬಸವಾದಿ ಶರಣರು ವಿರೋಧಿಸಿದ್ದರು. ಈ ಕಾರಣಕ್ಕೇ ಇವ ನಮ್ಮವ, ಇವ ನಮ್ಮವ ಎನ್ನುವ ಉದಾತ್ತವಾದ ಮೌಲ್ಯವನ್ನು 800 ವರ್ಷಗಳ ಹಿಂದೆಯೇ ಹೇಳಿದರು. ಹೀಗಾಗಿ ಜಾತಿ ವ್ಯವಸ್ಥೆಯನ್ನು ಶರಣರೇ ಹೋಗಲಾಡಿಸಬೇಕು ಎಂದು ಹೇಳಿದರು.

ಜಾತಿ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು. ಜಾತಿ, ವರ್ಗ, ಅಂತಸ್ತನ್ನು ಸೋಕಿಸಿಕೊಳ್ಳದೆ ಇರುವವರು ಮಾತ್ರ ನಿಜ ಶರಣರು. ಪಟ್ಟಭದ್ರ ಹಿತಾಸಕ್ತಿಗಳು ಇರುವುದು ಬಹಳ ಕಡಿಮೆ ಜನ. ಆದರೆ ಇವರು ಸ್ಟ್ರಾಂಗ್ ಇದ್ದಾರೆ. ಆದರೆ, ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು ಎಂದು ತಿಳಿಸಿದರು.

ಈ ವೇಳೆ ಬಸವಧರ್ಮ ಪೀಠದ ಪೀಠಾಧ್ಯಕ್ಷರಾದ ಶ್ರೀಮನ್ನಿರಂಜನ ಮಹಾ ಜಗದ್ಗುರು ಡಾ.ಮಾತೆ ಗಂಗಾದೇವಿಯವರು, ಪೀಠದ ಉಪಾದ್ಯಕ್ಷರಾದ ಮಹದೇಶ್ವರ ಸ್ವಾಮೀಜಿ, ಕುಂಬಳಗೋಡಿನ ವಿಶ್ವಕಲ್ಯಾಣ ಮಿಷನ್ ನ ಬಸವಯೋಗಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಶರಣ ವಿಜಯಾನಂದ ಕಾಶಪ್ಪನವರ್, ಸಚಿವರಾದ ಬೈರತಿ ಸುರೇಶ್, ತಿಮ್ಮಾಪುರ, ಶಾಸಕರಾದ ಎಂ.ನರೇಂದ್ರ ಸ್ವಾಮಿ, ಎಚ್.ವೈ.ಮೇಠಿ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

19 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago