Categories: ರಾಜ್ಯ

‘ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು’- ಸಿಎಂ ಸಿದ್ದರಾಮಯ್ಯ

ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳವನ್ನು ಉದ್ಘಾಟಿಸಿ, ಅವರು ಮಾತನಾಡಿದರು

ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ರೂಪಿಸಿದರು. ಇದನ್ನು ಮಾಡಿದ್ದು ದೇವರಲ್ಲ ಎಂದು ತಿಳಿಸಿದರು.

ಬಹು ಸಂಖ್ಯಾತರನ್ನು  ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆಯನ್ನು ಮಾಡಿದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಡ್ಯವನ್ನು ತೊಡೆದು ಹಾಕಿತು. ಹಣೆ ಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದನ್ನು  ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದ್ದರು ಎಂದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಾದಿ ಶರಣರು ಪ್ರತಿಪಾದಿಸಿದರು. ಧರ್ಮ ತಾರತಮ್ಯ ಮಾಡಬೇಡಿ, ಮನುಷ್ಯ ಮನುಷ್ಯನನ್ನು ದ್ವೇಷಿಸುವುದನ್ನು ಬಸವಾದಿ ಶರಣರು ವಿರೋಧಿಸಿದ್ದರು. ಈ ಕಾರಣಕ್ಕೇ ಇವ ನಮ್ಮವ, ಇವ ನಮ್ಮವ ಎನ್ನುವ ಉದಾತ್ತವಾದ ಮೌಲ್ಯವನ್ನು 800 ವರ್ಷಗಳ ಹಿಂದೆಯೇ ಹೇಳಿದರು. ಹೀಗಾಗಿ ಜಾತಿ ವ್ಯವಸ್ಥೆಯನ್ನು ಶರಣರೇ ಹೋಗಲಾಡಿಸಬೇಕು ಎಂದು ಹೇಳಿದರು.

ಜಾತಿ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು. ಜಾತಿ, ವರ್ಗ, ಅಂತಸ್ತನ್ನು ಸೋಕಿಸಿಕೊಳ್ಳದೆ ಇರುವವರು ಮಾತ್ರ ನಿಜ ಶರಣರು. ಪಟ್ಟಭದ್ರ ಹಿತಾಸಕ್ತಿಗಳು ಇರುವುದು ಬಹಳ ಕಡಿಮೆ ಜನ. ಆದರೆ ಇವರು ಸ್ಟ್ರಾಂಗ್ ಇದ್ದಾರೆ. ಆದರೆ, ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು ಎಂದು ತಿಳಿಸಿದರು.

ಈ ವೇಳೆ ಬಸವಧರ್ಮ ಪೀಠದ ಪೀಠಾಧ್ಯಕ್ಷರಾದ ಶ್ರೀಮನ್ನಿರಂಜನ ಮಹಾ ಜಗದ್ಗುರು ಡಾ.ಮಾತೆ ಗಂಗಾದೇವಿಯವರು, ಪೀಠದ ಉಪಾದ್ಯಕ್ಷರಾದ ಮಹದೇಶ್ವರ ಸ್ವಾಮೀಜಿ, ಕುಂಬಳಗೋಡಿನ ವಿಶ್ವಕಲ್ಯಾಣ ಮಿಷನ್ ನ ಬಸವಯೋಗಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಶರಣ ವಿಜಯಾನಂದ ಕಾಶಪ್ಪನವರ್, ಸಚಿವರಾದ ಬೈರತಿ ಸುರೇಶ್, ತಿಮ್ಮಾಪುರ, ಶಾಸಕರಾದ ಎಂ.ನರೇಂದ್ರ ಸ್ವಾಮಿ, ಎಚ್.ವೈ.ಮೇಠಿ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago