ಶಶಿಕಲಾ ಜೊಲ್ಲೆ, ಎಚ್.ಡಿ.ಕೆ ಅವರ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದರೂ ಅವರ ವಿರುದ್ಧದ ತನಿಖೆಗೆ ಅನುಮತಿ ನೀಡಿಲ್ಲ- ಸಿಎಂ ಸಿದ್ದರಾಮಯ್ಯ

ನ್ಯಾಯ-ಸತ್ಯದ ಪರವಾಗಿ ನಿಂತು ಪ್ರಜಾಪ್ರಭುತ್ವದ ಉಳಿವಿನ ಹೋರಾಟಕ್ಕೆ ಗಟ್ಟಿಯಾಗಿ ನಿಂತಿರುವ ಕ್ಯಾಬಿನೆಟ್, ಸಂಸದರು, ರಾಜ್ಯಸಭಾ ಸದಸ್ಯರುಗಳು, ಶಾಸಕರುಗಳು, ಇಡಿ ಪಕ್ಷ, ಹೈ ಕಮಾಂಡ್ ಮತ್ತು ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ನನ್ನ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯಪಾಲರು ರಾಷ್ಟ್ರಪತಿ, ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕೇ ಹೊರತು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ರಾಜ್ಯಪಾಲರ ಈ ಧೋರಣೆಯನ್ನು ಸಚಿವ ಸಂಪುಟ ತೀವ್ರವಾಗಿ ಖಂಡಿಸಿದೆ ಎಂದರು.

ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಚುನಾಯಿತ ಸರ್ಕಾರವನ್ನು ಅಸ್ತಿರಗೊಳಿಸುತ್ತಿದೆ. ಇದು ಪ್ರಜಾಪ್ರಭುತ್ವದ ಮೂಲಭೂತ ತತ್ವಕ್ಕೆ ಧಕ್ಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ, ಪ್ರಜಾತಂತ್ರಕ್ಕೆ ಧಕ್ಕೆ ಎಂದು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಹೇಳಿದರು.

ಎಲ್ಲಾ ರಾಜ್ಯ ಸರ್ಕಾರಗಳ ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಸೆಪ್ಟೆಂಬರ್ 3, 2021 ಕ್ಕೆ ಕೇಂದ್ರ ಸರ್ಕಾರವೇ ಕಳುಹಿಸಿರುವ ಸುತ್ತೋಲೆ ಪ್ರಕಾರವೇ ರಾಜ್ಯಪಾಲರು ಪ್ರೊಸೀಜರ್ ಅನುಸರಿಸಿಲ್ಲ. ಸುತ್ತೋಲೆಯಲ್ಲಿರುವ ನಿರ್ದೇಶನಗಳನ್ನೇ ರಾಜ್ಯಪಾಲರು ಪಾಲಿಸಿಲ್ಲ. ಆದ್ದರಿಂದ ರಾಜ್ಯಪಾಲರ ನಿರ್ಣಯ ಕಾನೂನುಬಾಹಿರ. ಈ ಕಾನೂನುಬಾಹಿರ ತೀರ್ಮಾನದ ವಿರುದ್ಧ ಕಾನೂನು ಹೋರಾಟ ನಡೆಸಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ ಎಂದರು.

ಚುನಾಯಿತ ಸರ್ಕಾರವನ್ನು ಕಿತ್ತಾಕುವ ಕೇಂದ್ರ ಸರ್ಕಾರದ ದುರುದ್ದೇಶದ ಪ್ರಯತ್ನಕ್ಕೆ ನಾವು ತಡೆಯೊಡ್ಡಬೇಕು ಎಂದು ನಿರ್ಣಯಿಸಿದ್ದೇವೆ. ನಮ್ಮ ಯಶಸ್ವೀ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಕೂಡ ವಿರೋಧಿಸಿದ್ದರು. ಹೀಗಾಗಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಕುಟಿಲತನವನ್ನು ಯಶಸ್ವಿಯಾಗಿ ವಿರೋಧಿಸಿ ಸತ್ಯವನ್ನು ಗೆಲ್ಲಿಸುತ್ತೇವೆ ಎಂದು ಹೇಳಿದರು.

ಅಬ್ರಹಾಂ ಎನ್ನುವವರು 26-7-2024 ರ ಬೆಳಗ್ಗೆ 11:30 ಗೆ ದೂರು ನೀಡಿದರೆ ಅದೇ ದಿನ 10 ಗಂಟೆಗೆ ರಾಜ್ಯಪಾಲರು ಶೋ ಕಾಸ್ ನೋಟಿಸ್ ರೆಡಿ ಮಾಡಿದ್ದರು. ಆದರೆ ಶಶಿಕಲಾ ಜೊಲ್ಲೆ, ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದರೂ ಅವರ ವಿರುದ್ಧದ ತನಿಖೆಗೆ ಅನುಮತಿ ನೀಡಿಲ್ಲ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ತನಿಖೆ ನಡೆದು ಕುಮಾರಸ್ವಾಮಿ ತಪ್ಪಿತಸ್ಥ ಎಂದು ಉಲ್ಲೇಖವಾಗಿದ್ದರೂ, ತನಿಖೆಯ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದ್ದರೂ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿಲ್ಲ ಎಂದು ತಿಳಿಸಿದರು.

ಹಾಗೆಯೇ ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿರುದ್ಧ ತನಿಖೆ ನಡೆದು ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾಗಿ, ತನಿಖಾ ವರದಿ ಉಲ್ಲೇಖವಾಗಿದ್ದರೂ ಇದೇ ರಾಜ್ಯಪಾಲರು ಕ್ರಮಕ್ಕೆ ಅನುಮತಿ ನೀಡಿಲ್ಲ. ಆದರೆ ನನ್ನ ವಿಚಾರದಲ್ಲಿ ಮಾತ್ರ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ ಎಂದರು.

ನನ್ನ ವಿರುದ್ಧ ತನಿಖೆ ನಡೆದಿಲ್ಲ. ತನಿಖೆಯಲ್ಲಿ ನನ್ನ ಪಾತ್ರದ ಉಲ್ಲೇಖವಿಲ್ಲ. ನನ್ನ ಪಾತ್ರದ ಬಗ್ಗೆ ಯಾರೂ ಯಾವುದೇ ದಾಖಲೆ ಕೊಟ್ಟಿಲ್ಲ. ನನ್ನ ಸರ್ಕಾರದ ಅವಧಿಯಲ್ಲಿ ನಡೆದ ವಿಚಾರ ಇದಲ್ಲ. ನನ್ನಿಂದ ಒಂದೂ ಪತ್ರ ಹೋಗಿಲ್ಲ. ನನ್ನ ಸಹಿ ಎಲ್ಲೂ ಇಲ್ಲ. ನನ್ನಿಂದ ಒಂದೂ ಮನವಿ ಪತ್ರವೂ ಹೋಗಿಲ್ಲ. ಎಲ್ಲವೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವುದು. ನಾನು ಏಕೆ ರಾಜೀನಾಮೆ ನೀಡಬೇಕು? ನನ್ನ ಪಾತ್ರದ ಬಗ್ಗೆ ಎಲ್ಲೂ, ಯಾರೂ ಹೇಳುತ್ತಿಲ್ಲ. ಆದರೂ ನಾನೇಕೆ ರಾಜೀನಾಮೆ ನೀಡಲಿ? ಎಂದು ಹೇಳಿದ್ದಾರೆ.

ಯಾವುದೇ ದಾಖಲೆ, ಸಾಕ್ಷ್ಯ, ತನಿಖೆ ಇಲ್ಲದಿದ್ದರೂ ರಾಜ್ಯಪಾಲರು ಆಧಾರವಿಲ್ಲದೆ ಅನುಮತಿ ನೀಡಿ ಕೇಂದ್ರದ ಒತ್ತಡಕ್ಕೆ ಒಳಗಾಗಿದ್ದಾರೆ. ತಪ್ಪು ಮಾಡದ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕಾನೂನುಬಾಹಿರ ನಿರ್ಣಯ ಕೈಗೊಂಡ ರಾಜ್ಯಪಾಲರು ರಾಜೀನಾಮೆ ನೀಡಬೇಕು ಎಂದರು.

ದೊಡ್ಡ ಷಡ್ಯಂತ್ರ ನಡೆಯುತ್ತಿರುವುದು ನಮಗೆ ಗೊತ್ತಿತ್ತು. ಅದಕ್ಕೆ ನಾವೂ ಹೋರಾಟದ ಸಿದ್ಧತೆ ಮಾಡಿಕೊಂಡಿದ್ದೇವೆ. ಬಿಜೆಪಿ-ಜೆಡಿಎಸ್ ರಾಜ್ಯದ ಜನರ ಮುಂದೆ ಬೆತ್ತಲಾಗುತ್ತಿದ್ದಾರೆ. ನಾವು ಸತ್ಯ ಮುಂದಿಟ್ಟು ಜನರ ನಡುವೆ ಮತ್ತಷ್ಟು ಗಟ್ಟಿ ಆಗುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ‌ ಸಮಾವೇಶಕ್ಕೆ ಒಂದೂವರೆ ಲಕ್ಷ ಜನ‌ ಸೇರಿದ್ದರು. ಬಿಜೆಪಿಗೆ 30 ಸಾವಿರ ಕೂಡ ಸೇರಿಲ್ಲ. ಜನ ನಮ್ಮ ಪರವಾಗಿ ಇರುವುದಕ್ಕೆ ಇದೇ ಸಾಕ್ಷಿ ಎಂದರು.

Ramesh Babu

Journalist

Recent Posts

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 minute ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago