Categories: ಐಪಿಎಲ್

ಶಾರ್ದುಲ್ ಬ್ಯಾಟಿಂಗ್ ಅಬ್ಬರ; ಸ್ಪಿನ್ನರ್ ಗಳ ಬಲೆಗೆ ಬಿದ್ದ ಆರ್ ಸಿಬಿ

ಕೊಲ್ಕತ್ತಾ : ಲಾರ್ಡ್ ಶಾರ್ದುಲ್ ಠಾಕೂರ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳು ಬೀಸಿದ ಬಲೆಗೆ ಬಿದ್ದ ಆರ್ ಸಿಬಿ ಬ್ಯಾಟ್ಸ್‌ಮನ್ ಗಳು 123 ರನ್ ಗಳಿಸಿ ಆಲೌಟ್ ಆಗುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ 81 ರನ್‌ಗಳ ಬೃಹತ್ ಗೆಲುವಿನ ನಗೆ ಬೀರಿದರು.

ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಕೆಕೆಆರ್ ಹಾಗೂ ಆರ್ ಸಿಬಿ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಪಾಫ್ ಡುಪ್ಲೆಸಿ ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು.

ಆರಂಭಿಕ ಜೋಡಿ ಗುಬಾ೯ಜ್ (57) ಹಾಗೂ ವೆಂಕಟೇಶ್ ಅಯ್ಯರ್ (3)ರನ್ ಗಳಿಸಿ ವಿಲ್ಲೆಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಮಂದಿಪ್(0), ನಾಯಕ ನಿತೀಶ್ ರಾಣ (1) ಹಾಗೂ ಅನುಭವಿ ಆಲ್ ರೌಂಡರ್(0) ಬೇಗನೆ ವಿಕೆಟ್ ಒಪ್ಪಿಸಿದರು.

ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ಶಾರ್ದುಲ್ ಠಾಕೂರ್ (68) ಹಾಗೂ ರಿಂಕು ಸಿಂಗ್ (46) ಶತಕದ ಜೊತೆಯಾಟದಿಂದ ತಂಡದ ಮೊತ್ತ 200 ರನ್ ಗಡಿ ದಾಟಿಸಿ ಆರ್ ಸಿಬಿ ಗೆ ಬೃಹತ್ ಮೊತ್ತದ ಗುರಿ ನೀಡಿತು.

ಗುರಿ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (21) ಹಾಗೂ ನಾಯಕ ಪಾಫ್ ಡುಪ್ಲೆಸಿ (23) ಮೊದಲ ವಿಕೆಟ್ ನಷ್ಟಕ್ಕೆ 44 ರನ್ ಗಳಿಸಿದರು, ನಂತರ ದಾಳಿಗೆ ಇಳಿದ ಸ್ಪಿನ್ನರ್ ಸುನೀಲ್ ನರೇನಾ ವಿರಾಟ್ ಕೊಹ್ಲಿ ವಿಕೆಟ್ ಕಬಳಿಸಿದರೆ ನಂತರ ಬಂದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ನಾಯಕನ ವಿಕೆಟ್ ಪಡೆದರು.

ಆರ್ ಸಿಬಿ ಪರವಾಗಿ ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ಬ್ರೇಸ್ವೆಲ್ (19), ಮ್ಯಾಕ್ಸವೆಲ್ (5), ಹಷ೯ಲ್ ಪಟೇಲ್ (0) , ಶಹಬಾದ್ ಅಹ್ಮದ್ (1), ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ (9) ಹಾಗೂ ಅನೂಜ್ ರಾವತ್ (1) ಪೆವಿಲಿಯನ್ ಪರೇಡ್ ನಡೆಸಿದರು.

ಕೊಲ್ಕತ್ತಾ ನೈಟ್ ರೈಡರ್ಸ್ ಪರವಾಗಿ ಸ್ಪಿನ್ನರ್ ವರುಣ್ ಚಕ್ರವರ್ತಿ 4 ವಿಕೆಟ್, ಪದಾರ್ಪಣೆ ಪಂದ್ಯವಾಡಿದ ಸುಯಾಶ್ ಶಮಾ೯ 3 ವಿಕೆಟ್, ಸುನೀಲ್ ನರೇನಾ 2 ವಿಕೆಟ್ ಹಾಗೂ ಶಾದು೯ಲ್ ಠಾಕೂರ್ 1 ವಿಕೆಟ್ ಪಡೆದರು. ಆಲ್ ರೌಂಡರ್ ಪ್ರದರ್ಶನ ನೀಡಿದ ಶಾರ್ದುಲ್ ಠಾಕೂರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

3 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

4 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

17 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

17 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

18 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

1 day ago