ಕೊಲ್ಕತ್ತಾ : ಲಾರ್ಡ್ ಶಾರ್ದುಲ್ ಠಾಕೂರ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳು ಬೀಸಿದ ಬಲೆಗೆ ಬಿದ್ದ ಆರ್ ಸಿಬಿ ಬ್ಯಾಟ್ಸ್ಮನ್ ಗಳು 123 ರನ್ ಗಳಿಸಿ ಆಲೌಟ್ ಆಗುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ 81 ರನ್ಗಳ ಬೃಹತ್ ಗೆಲುವಿನ ನಗೆ ಬೀರಿದರು.
ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಕೆಕೆಆರ್ ಹಾಗೂ ಆರ್ ಸಿಬಿ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಪಾಫ್ ಡುಪ್ಲೆಸಿ ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಶಾರ್ದುಲ್ ಠಾಕೂರ್ (68) ಹಾಗೂ ರಿಂಕು ಸಿಂಗ್ (46) ಶತಕದ ಜೊತೆಯಾಟದಿಂದ ತಂಡದ ಮೊತ್ತ 200 ರನ್ ಗಡಿ ದಾಟಿಸಿ ಆರ್ ಸಿಬಿ ಗೆ ಬೃಹತ್ ಮೊತ್ತದ ಗುರಿ ನೀಡಿತು.
ಗುರಿ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ (21) ಹಾಗೂ ನಾಯಕ ಪಾಫ್ ಡುಪ್ಲೆಸಿ (23) ಮೊದಲ ವಿಕೆಟ್ ನಷ್ಟಕ್ಕೆ 44 ರನ್ ಗಳಿಸಿದರು, ನಂತರ ದಾಳಿಗೆ ಇಳಿದ ಸ್ಪಿನ್ನರ್ ಸುನೀಲ್ ನರೇನಾ ವಿರಾಟ್ ಕೊಹ್ಲಿ ವಿಕೆಟ್ ಕಬಳಿಸಿದರೆ ನಂತರ ಬಂದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ನಾಯಕನ ವಿಕೆಟ್ ಪಡೆದರು.
ಆರ್ ಸಿಬಿ ಪರವಾಗಿ ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಬ್ರೇಸ್ವೆಲ್ (19), ಮ್ಯಾಕ್ಸವೆಲ್ (5), ಹಷ೯ಲ್ ಪಟೇಲ್ (0) , ಶಹಬಾದ್ ಅಹ್ಮದ್ (1), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ (9) ಹಾಗೂ ಅನೂಜ್ ರಾವತ್ (1) ಪೆವಿಲಿಯನ್ ಪರೇಡ್ ನಡೆಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…