ಕೊಲ್ಕತ್ತಾ : ಲಾರ್ಡ್ ಶಾರ್ದುಲ್ ಠಾಕೂರ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳು ಬೀಸಿದ ಬಲೆಗೆ ಬಿದ್ದ ಆರ್ ಸಿಬಿ ಬ್ಯಾಟ್ಸ್ಮನ್ ಗಳು 123 ರನ್ ಗಳಿಸಿ ಆಲೌಟ್ ಆಗುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ 81 ರನ್ಗಳ ಬೃಹತ್ ಗೆಲುವಿನ ನಗೆ ಬೀರಿದರು.
ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಕೆಕೆಆರ್ ಹಾಗೂ ಆರ್ ಸಿಬಿ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಪಾಫ್ ಡುಪ್ಲೆಸಿ ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಶಾರ್ದುಲ್ ಠಾಕೂರ್ (68) ಹಾಗೂ ರಿಂಕು ಸಿಂಗ್ (46) ಶತಕದ ಜೊತೆಯಾಟದಿಂದ ತಂಡದ ಮೊತ್ತ 200 ರನ್ ಗಡಿ ದಾಟಿಸಿ ಆರ್ ಸಿಬಿ ಗೆ ಬೃಹತ್ ಮೊತ್ತದ ಗುರಿ ನೀಡಿತು.
ಗುರಿ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ (21) ಹಾಗೂ ನಾಯಕ ಪಾಫ್ ಡುಪ್ಲೆಸಿ (23) ಮೊದಲ ವಿಕೆಟ್ ನಷ್ಟಕ್ಕೆ 44 ರನ್ ಗಳಿಸಿದರು, ನಂತರ ದಾಳಿಗೆ ಇಳಿದ ಸ್ಪಿನ್ನರ್ ಸುನೀಲ್ ನರೇನಾ ವಿರಾಟ್ ಕೊಹ್ಲಿ ವಿಕೆಟ್ ಕಬಳಿಸಿದರೆ ನಂತರ ಬಂದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ನಾಯಕನ ವಿಕೆಟ್ ಪಡೆದರು.
ಆರ್ ಸಿಬಿ ಪರವಾಗಿ ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಬ್ರೇಸ್ವೆಲ್ (19), ಮ್ಯಾಕ್ಸವೆಲ್ (5), ಹಷ೯ಲ್ ಪಟೇಲ್ (0) , ಶಹಬಾದ್ ಅಹ್ಮದ್ (1), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ (9) ಹಾಗೂ ಅನೂಜ್ ರಾವತ್ (1) ಪೆವಿಲಿಯನ್ ಪರೇಡ್ ನಡೆಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…