ಕೊಲ್ಕತ್ತಾ : ಲಾರ್ಡ್ ಶಾರ್ದುಲ್ ಠಾಕೂರ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳು ಬೀಸಿದ ಬಲೆಗೆ ಬಿದ್ದ ಆರ್ ಸಿಬಿ ಬ್ಯಾಟ್ಸ್ಮನ್ ಗಳು 123 ರನ್ ಗಳಿಸಿ ಆಲೌಟ್ ಆಗುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ 81 ರನ್ಗಳ ಬೃಹತ್ ಗೆಲುವಿನ ನಗೆ ಬೀರಿದರು.
ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಕೆಕೆಆರ್ ಹಾಗೂ ಆರ್ ಸಿಬಿ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಪಾಫ್ ಡುಪ್ಲೆಸಿ ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಶಾರ್ದುಲ್ ಠಾಕೂರ್ (68) ಹಾಗೂ ರಿಂಕು ಸಿಂಗ್ (46) ಶತಕದ ಜೊತೆಯಾಟದಿಂದ ತಂಡದ ಮೊತ್ತ 200 ರನ್ ಗಡಿ ದಾಟಿಸಿ ಆರ್ ಸಿಬಿ ಗೆ ಬೃಹತ್ ಮೊತ್ತದ ಗುರಿ ನೀಡಿತು.
ಗುರಿ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ (21) ಹಾಗೂ ನಾಯಕ ಪಾಫ್ ಡುಪ್ಲೆಸಿ (23) ಮೊದಲ ವಿಕೆಟ್ ನಷ್ಟಕ್ಕೆ 44 ರನ್ ಗಳಿಸಿದರು, ನಂತರ ದಾಳಿಗೆ ಇಳಿದ ಸ್ಪಿನ್ನರ್ ಸುನೀಲ್ ನರೇನಾ ವಿರಾಟ್ ಕೊಹ್ಲಿ ವಿಕೆಟ್ ಕಬಳಿಸಿದರೆ ನಂತರ ಬಂದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ನಾಯಕನ ವಿಕೆಟ್ ಪಡೆದರು.
ಆರ್ ಸಿಬಿ ಪರವಾಗಿ ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಬ್ರೇಸ್ವೆಲ್ (19), ಮ್ಯಾಕ್ಸವೆಲ್ (5), ಹಷ೯ಲ್ ಪಟೇಲ್ (0) , ಶಹಬಾದ್ ಅಹ್ಮದ್ (1), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ (9) ಹಾಗೂ ಅನೂಜ್ ರಾವತ್ (1) ಪೆವಿಲಿಯನ್ ಪರೇಡ್ ನಡೆಸಿದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…