ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ.
“ದಯೆಯೇ ಧರ್ಮದ ಮೂಲವಯ್ಯ” ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ ಎಂದು ಹೇಳಿದರು.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ‌ ಆತ್ಮವಿಮರ್ಷೆ ಮಾಡಿಕೊಳ್ಳಲಿ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ವಿಜಯೇಂದ್ರ ಹೊರುವರೇ? ಆರ್.ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ತಿಳಿಸಿದರು.

ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ, ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು ಎಂದರು.

ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ ಎಂದು ಹೇಳಿದರು.

ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

5 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

7 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

9 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

10 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

16 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

17 hours ago