ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ.
“ದಯೆಯೇ ಧರ್ಮದ ಮೂಲವಯ್ಯ” ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ ಎಂದು ಹೇಳಿದರು.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ‌ ಆತ್ಮವಿಮರ್ಷೆ ಮಾಡಿಕೊಳ್ಳಲಿ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ವಿಜಯೇಂದ್ರ ಹೊರುವರೇ? ಆರ್.ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ತಿಳಿಸಿದರು.

ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ, ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು ಎಂದರು.

ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ ಎಂದು ಹೇಳಿದರು.

ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

6 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

9 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

9 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

12 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

14 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

1 day ago