ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ.
“ದಯೆಯೇ ಧರ್ಮದ ಮೂಲವಯ್ಯ” ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ ಎಂದು ಹೇಳಿದರು.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ‌ ಆತ್ಮವಿಮರ್ಷೆ ಮಾಡಿಕೊಳ್ಳಲಿ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ವಿಜಯೇಂದ್ರ ಹೊರುವರೇ? ಆರ್.ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ತಿಳಿಸಿದರು.

ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ, ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು ಎಂದರು.

ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ ಎಂದು ಹೇಳಿದರು.

ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

4 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

14 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

15 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago