ಶಾಲಾ ಅಡುಗೆ ಸಿಬ್ಬಂದಿ ಗೌರವ ಧನ ಹೆಚ್ಚಿಸಲು ಮುಷ್ಕರ, ಮನವಿ

ಗೌರವ ಧನ ಹೆಚ್ಚಿಸುವಂತೆ ಶಾಲಾ ಅಡುಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದಾರೆ. ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗೌರವ ಧನ ಹೆಚ್ಚಿಸುವಂತೆ ಮನವಿ ಪತ್ರ ನೀಡುವ ಮೂಲಕ ಸರ್ಕಾರ ಗಮನಕ್ಕೆ ತರಲು ಆಗ್ರಹಿಸುತ್ತಿದ್ದಾರೆ.

ಅದೇ ರೀತಿ ಇಂದು ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆ ಸಿಬ್ಬಂದಿಯವರು ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗೌರವ ಧನ ಹೆಚ್ಚಿಸುವ ಕುರಿತು ಮನವಿ ಪತ್ರ ಸಲ್ಲಿಸಿದರು…

ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆ ಸಿಬ್ಬಂದಿಯವರಿಗೆ 4700‌ ರೂ. ಮತ್ತು ಸಹಾಯಕ ಅಡುಗೆ ಸಿಬ್ಬಂದಿಗೆ 4600 ರೂ. ಮಾಸಿಕ ಗೌರವ ಧನ ನೀಡಲಾಗುತ್ತಿದ್ದು, ಈ ಗೌರವ ಧನವು ತುಂಬಾ ಕಡಿಮೆಯಾಗಿದೆ. ಜೀವನ ನಡೆಸಲು ಕಷ್ಟಕರವಾಗುತ್ತಿದೆ. ಸರ್ಕಾರ ನೀತಿಯಾದ ಕನಿಷ್ಠ ವೇತನವನ್ನು ನಮಗೂ ಅನ್ವಯವಾಗುವಂತೆ ಜಾರಿ ಮಾಡಬೇಕು. ವರ್ಷ ಬಜೆಟ್ ಮಂಡಿಸುವಾಗ ನಮ್ಮ ಗೌರವ ಧನ ಹೆಚ್ಚಿಸಬೇಕು. ಗೌರವ ಧನ ಹೆಚ್ಚಿಸಲು ಒತ್ತಾಯಿಸುತ್ತಿರುವ ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು..

ಈ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆ ಸಿಬ್ಬಂದಿ ಇದ್ದರು…

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

10 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

11 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

23 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

2 days ago