ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ ನಗರ ಠಾಣಾ ಆರಕ್ಷಕ ನಿರೀಕ್ಷಕರಾದ ಅಮರೇಶ್ ಗೌಡ ಮುಖ್ಯಸ್ಥಿಕೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಐದು ಅಂಗಡಿಗಳಿಗೆ ನೋಟಿಸ್ ನೀಡಿ ದಂಡ ವಿಧಿಸಿದರು.

ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆ, ನಗರಸಭೆ, ಮಕ್ಕಳ ಸಹಾಯವಾಣಿ ಹಾಗೂ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಜಂಟಿ ದಾಳಿ ನಡೆಸಲಾಯಿತು.

ನಗರದ ವಿವಿಧ ಶಾಲೆಗಳ ಸುತ್ತಮುತ್ತಲಿನ ಅಂಗಡಿಗಳ ಮೇಲೆ ನಡೆಸಿದ ಈ ದಾಳಿಯಲ್ಲಿ 9 ಕೆಜಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಗುಟ್ಕಾ ಪ್ಯಾಕೆಟ್‌ಗಳು ಮತ್ತು ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆಯಾಗಿವೆ.

ನಿಯಮ ಉಲ್ಲಂಘಿಸಿ ಶಾಲಾ ವಲಯದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಸ್ಥಳದಲ್ಲೇ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಲಾಯಿತು.

ಕಳೆದ ಫೆಬ್ರವರಿ 9, 2026 ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಉಪಸ್ಥಿತಿಯಲ್ಲಿ ನಡೆದ ‘ಮಕ್ಕಳ ಹಕ್ಕುಗಳ ನಗರಸಭೆ’ ಕಾರ್ಯಕ್ರಮದಲ್ಲಿ, ಶಾಲಾ ಮಕ್ಕಳು ತಮ್ಮ ಶಾಲೆಯ ಆವರಣದಲ್ಲಿ ತಂಬಾಕು ಮಾರಾಟ ಮಾಡುತ್ತಿರುವ ಬಗ್ಗೆ ಮತ್ತು ಮಾದಕ ವಸ್ತುಗಳ ಬಳಕೆಯ ಬಗ್ಗೆ ದೂರು ನೀಡಿದ್ದರು. ನಗರಸಭೆ ಹಾಗೂ ಯುವ ಸಂಚಲನ ಟ್ರಸ್ಟ್ ಸಹಯೋಗದಲ್ಲಿ ನಡೆದ ಆ ಸಭೆಯಲ್ಲಿ ಇಲಾಖಾ ಪ್ರತಿನಿಧಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಜೊತೆಗೆ ಯುವ ಸಂಚಲನ ತಂಡದಿಂದ ಕಳೆದ ನಾಲ್ಕು ವರ್ಷಗಳಿಂದ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೆ ತರಲಾಗಿತ್ತು ಇದರ ಅನುಸರಣೆಯಾಗಿ ಇಂದು ಈ ಕಾರ್ಯಾಚರಣೆ ನಡೆದಿದೆ.

“ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲಾ ಆವರಣದ ಸುತ್ತಮುತ್ತ ಇಂತಹ ಪದಾರ್ಥಗಳ ಮಾರಾಟವನ್ನು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ,” ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರಾದ ಈರಣ್ಣ, ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಚಿದಾನಂದ್ ಮೂರ್ತಿ, ಮಕ್ಕಳ ಸಹಾಯವಾಣಿ ಮೇಲ್ವಿಚಾರಕರಾದ ಸೌಮ್ಯ ಜೆ, ನಗರಸಭೆ ಆರೋಗ್ಯ ನಿರೀಕ್ಷಕರಾದ ಕಾಂತರಾಜು ಹಾಗೂ ಪ್ರಸಾದ್ ನಾಯಕ್, ಟ್ರಸ್ಟ್ ನ ಯೋಜನಾ ಸಂಚಾಲಕರಾದ ನವೀನ್ ಹಾಗೂ ಟ್ರಸ್ಟ್ ನ ಸ್ವಯಂ ಸೇವಕರಾದ ಭರತ್ ಮತ್ತು ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

15 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

17 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

18 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

23 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

24 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago