ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ ನಗರ ಠಾಣಾ ಆರಕ್ಷಕ ನಿರೀಕ್ಷಕರಾದ ಅಮರೇಶ್ ಗೌಡ ಮುಖ್ಯಸ್ಥಿಕೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಐದು ಅಂಗಡಿಗಳಿಗೆ ನೋಟಿಸ್ ನೀಡಿ ದಂಡ ವಿಧಿಸಿದರು.

ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆ, ನಗರಸಭೆ, ಮಕ್ಕಳ ಸಹಾಯವಾಣಿ ಹಾಗೂ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಜಂಟಿ ದಾಳಿ ನಡೆಸಲಾಯಿತು.

ನಗರದ ವಿವಿಧ ಶಾಲೆಗಳ ಸುತ್ತಮುತ್ತಲಿನ ಅಂಗಡಿಗಳ ಮೇಲೆ ನಡೆಸಿದ ಈ ದಾಳಿಯಲ್ಲಿ 9 ಕೆಜಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಗುಟ್ಕಾ ಪ್ಯಾಕೆಟ್‌ಗಳು ಮತ್ತು ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆಯಾಗಿವೆ.

ನಿಯಮ ಉಲ್ಲಂಘಿಸಿ ಶಾಲಾ ವಲಯದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಸ್ಥಳದಲ್ಲೇ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಲಾಯಿತು.

ಕಳೆದ ಫೆಬ್ರವರಿ 9, 2026 ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಉಪಸ್ಥಿತಿಯಲ್ಲಿ ನಡೆದ ‘ಮಕ್ಕಳ ಹಕ್ಕುಗಳ ನಗರಸಭೆ’ ಕಾರ್ಯಕ್ರಮದಲ್ಲಿ, ಶಾಲಾ ಮಕ್ಕಳು ತಮ್ಮ ಶಾಲೆಯ ಆವರಣದಲ್ಲಿ ತಂಬಾಕು ಮಾರಾಟ ಮಾಡುತ್ತಿರುವ ಬಗ್ಗೆ ಮತ್ತು ಮಾದಕ ವಸ್ತುಗಳ ಬಳಕೆಯ ಬಗ್ಗೆ ದೂರು ನೀಡಿದ್ದರು. ನಗರಸಭೆ ಹಾಗೂ ಯುವ ಸಂಚಲನ ಟ್ರಸ್ಟ್ ಸಹಯೋಗದಲ್ಲಿ ನಡೆದ ಆ ಸಭೆಯಲ್ಲಿ ಇಲಾಖಾ ಪ್ರತಿನಿಧಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಜೊತೆಗೆ ಯುವ ಸಂಚಲನ ತಂಡದಿಂದ ಕಳೆದ ನಾಲ್ಕು ವರ್ಷಗಳಿಂದ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೆ ತರಲಾಗಿತ್ತು ಇದರ ಅನುಸರಣೆಯಾಗಿ ಇಂದು ಈ ಕಾರ್ಯಾಚರಣೆ ನಡೆದಿದೆ.

“ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲಾ ಆವರಣದ ಸುತ್ತಮುತ್ತ ಇಂತಹ ಪದಾರ್ಥಗಳ ಮಾರಾಟವನ್ನು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ,” ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರಾದ ಈರಣ್ಣ, ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಚಿದಾನಂದ್ ಮೂರ್ತಿ, ಮಕ್ಕಳ ಸಹಾಯವಾಣಿ ಮೇಲ್ವಿಚಾರಕರಾದ ಸೌಮ್ಯ ಜೆ, ನಗರಸಭೆ ಆರೋಗ್ಯ ನಿರೀಕ್ಷಕರಾದ ಕಾಂತರಾಜು ಹಾಗೂ ಪ್ರಸಾದ್ ನಾಯಕ್, ಟ್ರಸ್ಟ್ ನ ಯೋಜನಾ ಸಂಚಾಲಕರಾದ ನವೀನ್ ಹಾಗೂ ಟ್ರಸ್ಟ್ ನ ಸ್ವಯಂ ಸೇವಕರಾದ ಭರತ್ ಮತ್ತು ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

1 hour ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

8 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

17 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

22 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

1 day ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago