ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ ನಗರ ಠಾಣಾ ಆರಕ್ಷಕ ನಿರೀಕ್ಷಕರಾದ ಅಮರೇಶ್ ಗೌಡ ಮುಖ್ಯಸ್ಥಿಕೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಐದು ಅಂಗಡಿಗಳಿಗೆ ನೋಟಿಸ್ ನೀಡಿ ದಂಡ ವಿಧಿಸಿದರು.

ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆ, ನಗರಸಭೆ, ಮಕ್ಕಳ ಸಹಾಯವಾಣಿ ಹಾಗೂ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಜಂಟಿ ದಾಳಿ ನಡೆಸಲಾಯಿತು.

ನಗರದ ವಿವಿಧ ಶಾಲೆಗಳ ಸುತ್ತಮುತ್ತಲಿನ ಅಂಗಡಿಗಳ ಮೇಲೆ ನಡೆಸಿದ ಈ ದಾಳಿಯಲ್ಲಿ 9 ಕೆಜಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಗುಟ್ಕಾ ಪ್ಯಾಕೆಟ್‌ಗಳು ಮತ್ತು ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆಯಾಗಿವೆ.

ನಿಯಮ ಉಲ್ಲಂಘಿಸಿ ಶಾಲಾ ವಲಯದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಸ್ಥಳದಲ್ಲೇ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಲಾಯಿತು.

ಕಳೆದ ಫೆಬ್ರವರಿ 9, 2026 ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಉಪಸ್ಥಿತಿಯಲ್ಲಿ ನಡೆದ ‘ಮಕ್ಕಳ ಹಕ್ಕುಗಳ ನಗರಸಭೆ’ ಕಾರ್ಯಕ್ರಮದಲ್ಲಿ, ಶಾಲಾ ಮಕ್ಕಳು ತಮ್ಮ ಶಾಲೆಯ ಆವರಣದಲ್ಲಿ ತಂಬಾಕು ಮಾರಾಟ ಮಾಡುತ್ತಿರುವ ಬಗ್ಗೆ ಮತ್ತು ಮಾದಕ ವಸ್ತುಗಳ ಬಳಕೆಯ ಬಗ್ಗೆ ದೂರು ನೀಡಿದ್ದರು. ನಗರಸಭೆ ಹಾಗೂ ಯುವ ಸಂಚಲನ ಟ್ರಸ್ಟ್ ಸಹಯೋಗದಲ್ಲಿ ನಡೆದ ಆ ಸಭೆಯಲ್ಲಿ ಇಲಾಖಾ ಪ್ರತಿನಿಧಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಜೊತೆಗೆ ಯುವ ಸಂಚಲನ ತಂಡದಿಂದ ಕಳೆದ ನಾಲ್ಕು ವರ್ಷಗಳಿಂದ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೆ ತರಲಾಗಿತ್ತು ಇದರ ಅನುಸರಣೆಯಾಗಿ ಇಂದು ಈ ಕಾರ್ಯಾಚರಣೆ ನಡೆದಿದೆ.

“ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲಾ ಆವರಣದ ಸುತ್ತಮುತ್ತ ಇಂತಹ ಪದಾರ್ಥಗಳ ಮಾರಾಟವನ್ನು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ,” ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರಾದ ಈರಣ್ಣ, ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಚಿದಾನಂದ್ ಮೂರ್ತಿ, ಮಕ್ಕಳ ಸಹಾಯವಾಣಿ ಮೇಲ್ವಿಚಾರಕರಾದ ಸೌಮ್ಯ ಜೆ, ನಗರಸಭೆ ಆರೋಗ್ಯ ನಿರೀಕ್ಷಕರಾದ ಕಾಂತರಾಜು ಹಾಗೂ ಪ್ರಸಾದ್ ನಾಯಕ್, ಟ್ರಸ್ಟ್ ನ ಯೋಜನಾ ಸಂಚಾಲಕರಾದ ನವೀನ್ ಹಾಗೂ ಟ್ರಸ್ಟ್ ನ ಸ್ವಯಂ ಸೇವಕರಾದ ಭರತ್ ಮತ್ತು ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

3 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

6 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

7 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

15 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago