ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಸುತ್ತ 100 ಗಜ ಅಂತರದಲ್ಲಿ ತಂಬಾಕು ಮಾರಾಟ ನಿಷೇಧ ಮಾಡಲಾಗಿದ್ದು, ತಂಬಾಕು ಮಾರಾಟ ಮಾಡುತ್ತಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ ಮತ್ತು ಜಿಲ್ಲಾ ಕಣ್ಗಾವಲು ಸಮಿತಿ ಮತ್ತು ಜಿಲ್ಲಾ ಕಾರ್ಯಕಾರಿ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ/ ಕಾಲೇಜು/ ವಿಶ್ವವಿದ್ಯಾಲಯಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸಲು ಹಾಗೂ COTPA Sec 6bಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ಶೈಕ್ಷಣಿಕ ಸಂಸ್ಥೆಗಳ ಸುತ್ತಲೂ ಯಾರಾದರೂ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ನಮಗೆ ದೂರು ನೀಡಬಹುದು.
ಶೈಕ್ಷಣಿಕ ಸಂಸ್ಥೆಗಳ ಹತ್ತಿರ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದಾರೆ ಎಂದು ಸಂಘಟನೆಗಳು ದೂರು ನೀಡಿದ್ದಾರೆ. ಅಧಿಕಾರಿಗಳು ಅನಿರೀಕ್ಷಿತ ದಾಳಿ ಕೈಗೊಂಡು ಕೂಡಲೇ ಎಲ್ಲಾ ಶಾಲಾ ಕಾಲೇಜುಗಳ ಬಳಿ ಪರಿಶೀಲನೆ ನಡೆಸಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದರು.
18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮಾರಾಟ ಮಾಡುವಂತಿಲ್ಲ. ಬೀಡಿ, ಸಿಗರೇಟು ಗುಟ್ಕಾವನ್ನು ಮಕ್ಕಳಿಗೆ ಮಾರಾಟ ಮಾಡಬಾರದೆಂಬ ನಿಯಮಗಳಿದ್ದರೂ ವ್ಯಾಪಾರಿಗಳು ಪಾಲಿಸುತ್ತಿಲ್ಲ.
ನಿಷೇಧಿತ ಸ್ಥಳಗಳಲ್ಲಿ ತಂಬಾಕು ಮಾರಾಟ ಮತ್ತು ಸೇವನೆ ಹಾಗೂ ತಂಬಾಕು ಮಾರಾಟ ಪರವಾನಗಿ ಇಲ್ಲದೇ ಮಾರಾಟ ಮಾಡಿದವರಿಗೆ ದಂಡ ವಿಧಿಸಲಾಗಿತ್ತದೆ ಜೊತೆಗೆ ಶಿಕ್ಷೆಗೆ ಗುರಿಯಾಗಬಹುದು. ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ತಂಬಾಕು ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಿ ಎಂದರು.
*178 ದಾಳಿಗಳು, ರೂ.69241 ದಂಡ*
ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ಕೋಟ್ಪಾ-2003 ಕಾಯ್ದೆ ಅನ್ವಯ ಏಪ್ರಿಲ್ 2025 ರಿಂದ ಅಕ್ಟೋಬರ್ ವರೆಗೆ ಜಿಲ್ಲೆಯಾದ್ಯಂತ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ 156 ದಾಳಿ ನಡೆಸಿದ್ದು, ನಿಯಮಗಳ ಉಲ್ಲಂಘನೆ ಮಾಡಿದವರ ವಿರುದ್ಧ ಸೆಕ್ಷನ್ 4 ರ ಅಡಿಯಲ್ಲಿ 538 ಪ್ರಕರಣ ದಾಖಲಿಸಿ 69241 ರೂಪಾಯಿ ದಂಡವನ್ನು ಸಂಗ್ರಹಿಸಲಾಗಿದೆ ಎಂದು ತಂಬಾಕು ನಿಯಂತ್ರಣಾಧಿಕಾರಿಗಳು ಮಾಹಿತಿ ನೀಡಿದರು.
*ವರ್ಷದಲ್ಲಿ 9,967 ನಾಯಿ ಕಡಿತ ವರದಿ*
2025 ರ ಜನವರಿ ಮಾಹೆಯಿಂದ ಡಿಸೆಂಬರ್ ಅಂತ್ಯಕ್ಕೆ 9,967 ನಾಯಿ ಕಡಿತದ ವರದಿ ಆಗಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಹೆಚ್ಚಾಗಿದೆ.
ನಾಯಿ ಹಾವಳಿ ನಿಯಂತ್ರಣಕ್ಕೆ ಸಂತಾನಹರಣ ಚಿಕಿತ್ಸೆ ಮಾಡಿಸಬೇಕು, ಸಂಬಂಧಪಟ್ಟ ಅಧಿಕಾರಿಗಳು ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ, ನಾಯಿಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಸೂಕ್ತ ಜಾಗ ಗುರುತಿಸಿ , ಜೊತೆಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಕಾರ್ಯಾರಂಭ ಮಾಡಿ ಎಂದರು.
ಸಾರ್ವಜನಿಕರು ಕೂಡ ನಾಯಿ, ಹಾವು ಕಡಿತದ ಬಗ್ಗೆ ನಿರ್ಲಕ್ಷ್ಯ ತೋರದೇ ತಕ್ಷಣವೇ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ॥ ಲಕ್ಕಾ ಕೃಷ್ಣಾ ರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ॥ ಹೇಮಾವತಿ ಎ.ವಿ, ತಂಬಾಕು ನಿಯಂತ್ರಣಾಧಿಕಾರಿ ಡಾ॥ ವಿದ್ಯಾರಾಣಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…