ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ದಲಿತ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ ಎಂದರು.
1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಆರ್ಥಿಕ ಅನುಮೋದನೆ ನೀಡಿದ್ದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ₹725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದು ತಿಳಿಸಿದರು.
ಮಕ್ಕಳಿಗೆ ಉತ್ತಮ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ ಎಂದರು.
ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಚಾರಿಕ ಗುಣ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು ಎಂದು ಹೇಳಿದರು.
ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಮಕ್ಕಳ ಅನುಕೂಲಕ್ಕಾಗಿ ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇಟ್ಟಿಲ್ಲ ಎಂದರು.
ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು ಎಂದು ಹೇಳಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…