ಶಾಲಾ ಕೊಠಡಿಗಳ ನಿರ್ಮಾಣಕ್ಕೆ 725 ಕೋಟಿ ಹಣ ಕೊಟ್ಟಿದ್ದೇವೆ- ಸಿಎಂ ಸಿದ್ದರಾಮಯ್ಯ

ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ದಲಿತ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ‌ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ ಎಂದರು.

1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಆರ್ಥಿಕ ಅನುಮೋದನೆ ನೀಡಿದ್ದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ₹725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದು ತಿಳಿಸಿದರು.

ಮಕ್ಕಳಿಗೆ ಉತ್ತಮ‌ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ‌ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ ಎಂದರು.

ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಚಾರಿಕ ಗುಣ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು ಎಂದು ಹೇಳಿದರು.

ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಮಕ್ಕಳ‌ ಅನುಕೂಲಕ್ಕಾಗಿ ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇಟ್ಟಿಲ್ಲ ಎಂದರು.

ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ‌ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು ಎಂದು ಹೇಳಿದರು.

Ramesh Babu

Journalist

Recent Posts

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

5 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

6 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

10 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

14 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

18 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago