ಶಾಲಾ ಕೊಠಡಿಗಳ ನಿರ್ಮಾಣಕ್ಕೆ 725 ಕೋಟಿ ಹಣ ಕೊಟ್ಟಿದ್ದೇವೆ- ಸಿಎಂ ಸಿದ್ದರಾಮಯ್ಯ

ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ದಲಿತ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ‌ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ ಎಂದರು.

1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಆರ್ಥಿಕ ಅನುಮೋದನೆ ನೀಡಿದ್ದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ₹725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದು ತಿಳಿಸಿದರು.

ಮಕ್ಕಳಿಗೆ ಉತ್ತಮ‌ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ‌ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ ಎಂದರು.

ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಚಾರಿಕ ಗುಣ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು ಎಂದು ಹೇಳಿದರು.

ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಮಕ್ಕಳ‌ ಅನುಕೂಲಕ್ಕಾಗಿ ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇಟ್ಟಿಲ್ಲ ಎಂದರು.

ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ‌ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು ಎಂದು ಹೇಳಿದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

7 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

9 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

14 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

16 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

19 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago