ಶಾಲಾ ಕೊಠಡಿಗಳ ನಿರ್ಮಾಣಕ್ಕೆ 725 ಕೋಟಿ ಹಣ ಕೊಟ್ಟಿದ್ದೇವೆ- ಸಿಎಂ ಸಿದ್ದರಾಮಯ್ಯ

ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ದಲಿತ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ‌ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ ಎಂದರು.

1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಆರ್ಥಿಕ ಅನುಮೋದನೆ ನೀಡಿದ್ದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ₹725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದು ತಿಳಿಸಿದರು.

ಮಕ್ಕಳಿಗೆ ಉತ್ತಮ‌ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ‌ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ ಎಂದರು.

ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಚಾರಿಕ ಗುಣ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು ಎಂದು ಹೇಳಿದರು.

ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಮಕ್ಕಳ‌ ಅನುಕೂಲಕ್ಕಾಗಿ ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇಟ್ಟಿಲ್ಲ ಎಂದರು.

ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ‌ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು ಎಂದು ಹೇಳಿದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

53 minutes ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

3 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

4 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

17 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

21 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago