ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಪರಸ್ಪರ ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ಚಿಂತಾಮಣಿ ತಾಲೂಕಿನ ಸೀತರಾಮಪುರ ಗ್ರಾಮದ ವಂದನಾ (16), ನವೀನ್ (22) ಮೃತ ಪ್ರೇಮಿಗಳು ಎಂದು ಮೂಲಗಳಿಂದ ತಿಳಿದು ಬಂದಿದೆ.
ನವೀನ್ ಡ್ರೈವರ್ ಕೆಲಸವನ್ನು ಮಾಡುತ್ತಿದ್ದು, ತಮ್ಮದೇ ಸಮುದಾಯದ ವಂದನಾಳನ್ನು ಪ್ರೀತಿ ಮಾಡುತ್ತಿದ್ದನು. ಈ ವಿಚಾರ ಪೋಷಕರ ಗಮನಕ್ಕೆ ಬಂದು ಮಾರ್ಚ್ 30 ರಂದು ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕೇಸ್ ಅಡಿ ದೂರು ದಾಖಲಿಸಿಕೊಂಡು ಬಾಲಕಿಯನ್ನು ಸಾಂತ್ವಾನ ಕೇಂದ್ರಕ್ಕೆ ರವಾನಿಸಿದ್ದರು.
ಇನ್ನೂ ಕಳೆದ ದಿನವಷ್ಟೇ ಇಬ್ಬರು ಒಂದು ಕಡೆ ಸೇರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಲಾಗಿದ್ದು, ಅದರಂತೆ, ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಗ್ರಾಮದ ಅರಣ್ಯ ಪ್ರದೇಶಕ್ಕೆ ಹೋಗಿ ಕಳೆದ ಸೆ.13 ರ ಸಂಜೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ನಗರದ ಸಾರ್ವಜನಿಕ ಶವಗಾರಕ್ಕೆ ರವಾನಿಸಿದ್ದಾರೆ.
ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಬಾಲಕಿ ಹಾಗೂ ಯುವಕನ ಪೋಷಕರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿದ್ದಾರೆ.
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದ್ದು, ಸಂಪೂರ್ಣವಾಗಿ 'ನೆಗೆಟಿವ್' ಆಗಿದೆ. ಆ ವ್ಯಕ್ತಿಗೆ…
ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಅವಕಾಶ…
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ…
ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…