ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಮಾವಿನ ಮರಕ್ಕೆ ನೇಣಿಗೆ ಶರಣು

ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಪರಸ್ಪರ ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ಚಿಂತಾಮಣಿ ತಾಲೂಕಿನ ಸೀತರಾಮಪುರ ಗ್ರಾಮದ ವಂದನಾ (16), ನವೀನ್ (22) ಮೃತ ಪ್ರೇಮಿಗಳು ಎಂದು ಮೂಲಗಳಿಂದ ತಿಳಿದು ಬಂದಿದೆ.

ನವೀನ್ ಡ್ರೈವರ್ ಕೆಲಸವನ್ನು ಮಾಡುತ್ತಿದ್ದು, ತಮ್ಮದೇ ಸಮುದಾಯದ ವಂದನಾಳನ್ನು ಪ್ರೀತಿ ಮಾಡುತ್ತಿದ್ದನು. ಈ ವಿಚಾರ ಪೋಷಕರ ಗಮನಕ್ಕೆ ಬಂದು ಮಾರ್ಚ್ 30 ರಂದು ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕೇಸ್ ಅಡಿ ದೂರು ದಾಖಲಿಸಿಕೊಂಡು ಬಾಲಕಿಯನ್ನು ಸಾಂತ್ವಾನ ಕೇಂದ್ರಕ್ಕೆ ರವಾನಿಸಿದ್ದರು.

ಇನ್ನೂ ಕಳೆದ ದಿನವಷ್ಟೇ ಇಬ್ಬರು ಒಂದು ಕಡೆ ಸೇರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಲಾಗಿದ್ದು, ಅದರಂತೆ, ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಗ್ರಾಮದ ಅರಣ್ಯ ಪ್ರದೇಶಕ್ಕೆ ಹೋಗಿ ಕಳೆದ ಸೆ.13 ರ ಸಂಜೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ನಗರದ ಸಾರ್ವಜನಿಕ ಶವಗಾರಕ್ಕೆ ರವಾನಿಸಿದ್ದಾರೆ.

ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಬಾಲಕಿ ಹಾಗೂ ಯುವಕನ ಪೋಷಕರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿದ್ದಾರೆ.

Ramesh Babu

Journalist

Recent Posts

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

6 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

7 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

7 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

16 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

1 day ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

1 day ago