ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಮಾವಿನ ಮರಕ್ಕೆ ನೇಣಿಗೆ ಶರಣು

ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಪರಸ್ಪರ ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ಚಿಂತಾಮಣಿ ತಾಲೂಕಿನ ಸೀತರಾಮಪುರ ಗ್ರಾಮದ ವಂದನಾ (16), ನವೀನ್ (22) ಮೃತ ಪ್ರೇಮಿಗಳು ಎಂದು ಮೂಲಗಳಿಂದ ತಿಳಿದು ಬಂದಿದೆ.

ನವೀನ್ ಡ್ರೈವರ್ ಕೆಲಸವನ್ನು ಮಾಡುತ್ತಿದ್ದು, ತಮ್ಮದೇ ಸಮುದಾಯದ ವಂದನಾಳನ್ನು ಪ್ರೀತಿ ಮಾಡುತ್ತಿದ್ದನು. ಈ ವಿಚಾರ ಪೋಷಕರ ಗಮನಕ್ಕೆ ಬಂದು ಮಾರ್ಚ್ 30 ರಂದು ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕೇಸ್ ಅಡಿ ದೂರು ದಾಖಲಿಸಿಕೊಂಡು ಬಾಲಕಿಯನ್ನು ಸಾಂತ್ವಾನ ಕೇಂದ್ರಕ್ಕೆ ರವಾನಿಸಿದ್ದರು.

ಇನ್ನೂ ಕಳೆದ ದಿನವಷ್ಟೇ ಇಬ್ಬರು ಒಂದು ಕಡೆ ಸೇರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಲಾಗಿದ್ದು, ಅದರಂತೆ, ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಗ್ರಾಮದ ಅರಣ್ಯ ಪ್ರದೇಶಕ್ಕೆ ಹೋಗಿ ಕಳೆದ ಸೆ.13 ರ ಸಂಜೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ನಗರದ ಸಾರ್ವಜನಿಕ ಶವಗಾರಕ್ಕೆ ರವಾನಿಸಿದ್ದಾರೆ.

ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಬಾಲಕಿ ಹಾಗೂ ಯುವಕನ ಪೋಷಕರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

3 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

5 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

6 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

11 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

14 hours ago