ಶಾಲೆಗಳಲ್ಲಿನ ಶೌಚಾಲಯ ಸ್ವಚ್ಛತೆಯಲ್ಲಿ ಮಕ್ಕಳ ಬಳಕೆಗೆ ನಿಷೇಧ: ಒಂದು ವೇಳೆ ಬಳಸಿಕೊಂಡರೆ ಬೀಳುತ್ತೆ ಕೇಸ್

ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಸ್ವಚ್ಚಗೊಳಿಸುವಂತಹ ಶಿಕ್ಷಕರ ಅಮಾನವೀಯ ವರ್ತನೆಗೆ ಬ್ರೇಕ್‌ ಹಾಕಲು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದೆ. ಇನ್ನು ಮುಂದೆ ಶಾಲಾ ವಿದ್ಯಾರ್ಥಿಗಳ ಕೈಯಲ್ಲಿ ಟಾಯ್ಲೆಟ್ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆಯೇ ಎಫ್‌ಐಆ‌ರ್ ದಾಖಲಿಸುವುದಾಗಿ ಶಿಕ್ಷಣ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಬಳಸಿಕೊಳ್ಳಬಾರದು ಎಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ.

ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿ, ಆಕ್ಷೇಪಿಸಿದೆ.

ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಅಲ್ಲದೆ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

11 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

20 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

22 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

23 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

2 days ago