ಶಾಲೆಗಳಲ್ಲಿನ ಶೌಚಾಲಯ ಸ್ವಚ್ಛತೆಯಲ್ಲಿ ಮಕ್ಕಳ ಬಳಕೆಗೆ ನಿಷೇಧ: ಒಂದು ವೇಳೆ ಬಳಸಿಕೊಂಡರೆ ಬೀಳುತ್ತೆ ಕೇಸ್

ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಸ್ವಚ್ಚಗೊಳಿಸುವಂತಹ ಶಿಕ್ಷಕರ ಅಮಾನವೀಯ ವರ್ತನೆಗೆ ಬ್ರೇಕ್‌ ಹಾಕಲು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದೆ. ಇನ್ನು ಮುಂದೆ ಶಾಲಾ ವಿದ್ಯಾರ್ಥಿಗಳ ಕೈಯಲ್ಲಿ ಟಾಯ್ಲೆಟ್ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆಯೇ ಎಫ್‌ಐಆ‌ರ್ ದಾಖಲಿಸುವುದಾಗಿ ಶಿಕ್ಷಣ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಬಳಸಿಕೊಳ್ಳಬಾರದು ಎಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ.

ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿ, ಆಕ್ಷೇಪಿಸಿದೆ.

ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಅಲ್ಲದೆ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

3 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

7 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago