Categories: ಕೋಲಾರ

ಶಾಲೆಗಳಲ್ಲಿ ಬಿಸಿಯೂಟ ಗುಣಮಟ್ಟದಿಂದ ಇರಬೇಕು ದೂರು ಬಂದು ಸಿಕ್ಕಿಬಿದ್ದರೆ ಶಿಸ್ತು ಕ್ರಮ ಗ್ಯಾರಂಟಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಬಂದಿದೆ ನಾವೇ ವಾರಕ್ಕೊಮ್ಮೆ ಶಾಲೆಗಳಿಗೆ ಭೇಟಿ ನೀಡಲಿದ್ದೇವೆ ಏನಾದರೂ ತಪ್ಪು ನಡೆದರೆ ಸ್ಥಳದಲ್ಲಿಯೇ ಶಿಸ್ತು ಕ್ರಮಕ್ಕೆ ಆದೇಶಿಸಲಾಗುತ್ತದೆ ತಪ್ಪು ನಡೆಯದ ರೀತಿಯಲ್ಲಿ ಕೆಲಸ ಮಾಡಿ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಾಲೆಗಳಲ್ಲಿ ಮಕ್ಕಳಿಗೆ ಓದಲು ಬರೆಯಲು ಪೂರಕವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಜೊತೆಗೆ ಮಧ್ಯಾಹ್ನದ ಬಿಸಿಯೂಟ ಗುಣಮಟ್ಟದಿಂದ ಇರಬೇಕು ಶಾಲೆಯಲ್ಲಿಯೇ ಶಿಕ್ಷಕರು ಕೂಡ ಬಿಸಿಯೂಟ ಕಡ್ಡಾಯವಾಗಿ ಮಾಡಬೇಕು ಖುದ್ದು ಭೇಟಿ ಮಾಡತ್ತೇವೆ ಸಿಕ್ಕಿಬಿದ್ದರೆ ಕ್ರಮ ಗ್ಯಾರಂಟಿ ಎಂದು ತಿಳಿಸಿದರು

ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿಯೊಂದು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಮತ್ತು ಜಾಗ ಇರುವ ರೀತಿಯಲ್ಲಿ ಮಾಡುತ್ತಿದ್ದೇವೆ ಅಂಗನವಾಡಿ‌ ಶಿಕ್ಷಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಹತ್ವವನ್ನು ಕೊಡಬೇಕಾಗಿದೆ ಅವರಿಗೆ ಮುಂದಿನ ಭವಿಷ್ಯವನ್ನು ಕಾಣುವಂತೆ ಮಾಡುವ ಜಾಗವಾಗಿದೆ ಕೆಲವು ಕಡೆ ದೇವಸ್ಥಾನಗಳಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿವೆ ಅಂತಹ ಸಂದರ್ಭಗಳು ಬಂದರೆ ಭಾಗಿಯಾದ ಅಷ್ಟು ಜನರ ಮೇಲೆ ದೂರು ದಾಖಲಿಸಿ ಬಾಲ್ಯ ವಿವಾಹ ಮಾಡಿಸಿ‌ ಸಿಲುಕಿಸಿಕೊಂಡರೆ ಅಂತಹವರಿಗೆ ಕಠಿಣ ಕ್ರಮ ಕೈಗೊಳ್ಳುವುದು ಗ್ಯಾರಂಟಿ ಎಂದರು.

ಸುಮಾರು ಏಳು ಎಂಟು ತಿಂಗಳ ಹಿಂದೆ ಜೆಜೆಎಂ ಯೋಜನೆಯಲ್ಲಿ ಕುಡಿಯುವ ನೀರಿಗೆ ರಸ್ತೆ ಅಗೆದು ಹಾಗೇ ಬಿಡಲಾಗಿದೆ ಇದರಿಂದಾಗಿ ಮಕ್ಕಳು, ಹಿರಿಯರು, ಜಾನುವಾರುಗಳು ಬಿದ್ದು ಗಾಯಗಳಾಗಿವೆ ಜನರಿಗೆ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗಿದೆ ಕೂಡಲೇ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರು ಕೊಡುವ ಕೆಲಸವನ್ನು ಮಾಡಬೇಕು ಎಂದರು ಇದಕ್ಕೆ ಉತ್ತರಿಸಿದ ಅಧಿಕಾರಿ ಜೆಜೆಎಂ ಯೋಜನೆಯಲ್ಲಿ 309 ಹಳ್ಳಿಯಲ್ಲಿ ಕಾಮಗಾರಿ ನಡೆಯುತ್ತಿದೆ ಪರೀಕ್ಷಾ ವರದಿ ಬರುವವೆರೆಗೆ ಕಾಮಗಾರಿ ಪೂರ್ಣಗೊಳಿಸಲು ಆಗುತ್ತಿಲ್ಲ ಆರೇಳು ತಿಂಗಳು ಹಿಡಿಯುತ್ತದೆ‌. ವಿಳಂಬ ಮಾಡುತ್ತಿದ್ದಾರೆ‌ ಆದಷ್ಟು ಬೇಗ ಮುಗಿಸಲು ಕ್ರಮ ವಹಿಸುತ್ತೇವೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಗೆ ಹಣ ಕೊರತೆ ಎಲ್ಲಾ ಹಣವನ್ನು ಗ್ಯಾರಂಟಿಗಳಿಗೆ ಬಳಕೆಯಾಗಿದೆ ಎಂದು ವಿರೋಧಿಗಳು ಹೊರಗಡೆ ಅಪಪ್ರಚಾರ ಮಾಡತ್ತಾರೆ ಅವರಿಗೆ ಉತ್ತರವನ್ನು ನೀವುಗಳೇ ಕೊಡಬೇಕಾಗಿದೆ ಕೋಲಾರ ಕ್ಷೇತ್ರಕ್ಕೆ 400 ಕೋಟಿ ಅನುದಾನ ಬಂದಿದೆ ಇನ್ನೂ ಬರುತ್ತೇವೆ ಕೇಳಿದಷ್ಟು ಹಣ ಕೊಡಕ್ಕೆ ಸರಕಾರ ಬದ್ದವಾಗಿದೆ ಅಭಿವೃದ್ಧಿ ಮಾಡಲು ನೀವುಗಳು ಸಿದ್ದರಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮುಂದಿನ ಬಾರಿ ನಡೆಯುವ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಬೇರೆ ಯಾರೂ ಕೂಡ ಸಭೆ ಇಟ್ಟುಕೊಳ್ಳಬಾರದು‌‌ ಅಧಿಕಾರಿಗಳು ಮಧ್ಯೆ ಎದ್ದು ಹೋಗುತ್ತಾರೆ ಮತ್ತೊಂದು ಸಭೆ ಇದೆ ಎಂದು ಈ ಸಭೆಗೆ ಬರಲ್ಲ ಜೊತೆಗೆ ಇವತ್ತು ಕಾರಣ ಕೊಡದೇ ಯಾರು ಸಭೆಗೆ ಬಂದಿಲ್ಲ ಅಂತಹ ಅಧಿಕಾರಿಗಳಿಗೆ ನೋಟೀಸ್ ನೀಡಿ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಸರಕಾರವು ಅಭಿವೃದ್ಧಿಗೆ ಬದ್ದವಾಗಿ ಕೆಲಸ ಮಾಡತ್ತಿದೆ ಕೆಲವು ಕಡೆಗಳಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಕಾಮಗಾರಿ ನಡೆಸದೇ ಇರುವುದು ಸರಿಯಲ್ಲ ಕೂಡಲೇ ಕಾಮಗಾರಿ ಪ್ರಾರಂಭ ಮಾಡಬೇಕು ಕಾಮಗಾರಿ ನಡೆಯುವ ಕಡೆ ಬೇಗ ಮುಗಿಸುವ ಕೆಲಸ ಮಾಡಬೇಕು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವ ಗ್ರಾಮದಲ್ಲಿ ಶುದ್ದ ನೀರಿನ ಘಟಕಗಳು ಹಾಗೂ ಹೈ ಮಾಸ್ಕ್ ಲೈಟ್ ಗಳು ಇಲ್ಲವೋ ಅಂತಹ ಗ್ರಾಮಗಳನ್ನು ಪಟ್ಟಿ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ ಮೈತ್ರಿ ಮಾತನಾಡಿ ಶಾಲೆಗಳಲ್ಲಿ ಶೌಚಾಲಯ ನೀರು ಸಮಸ್ಯೆ ಇಲ್ಲದಂತೆ ನೋಡಿಕೊಳ್ಳಬೇಕು ವಕ್ಕಲೇರಿ ಹೋಬಳಿಯ ತ್ಯಾವನಹಳ್ಳಿ ಪ್ರೌಢಶಾಲೆಯ ಕಾಂಪೌಂಡ್ ಕಾಮಗಾರಿ‌ಯ ಸಂಬಂಧ ದಾಖಲೆ ಕೊಡಿ ಸರ್ವೇ ಮಾಡೋಣ ಈ ಶಾಲೆಗೆ ನಾನು ಭೇಟಿ ಕೊಡುತ್ತೇನೆ ಹಿಂದುಳಿದ ಹಾಸ್ಟೆಲ್ ‌ಗಳಲ್ಲಿ ಬುಕ್ ಕಾರ್ನರ್ ಇರಬೇಕು. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಪೂರಕವಾಗಿರಬೇಕು. ರೇಷ್ಮೆಯಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನದಲ್ಲಿ ಬರುವಂತೆ ಮಾಡಬೇಕು ಎಂದು ತಿಳಿಸಿದರು ಸಭೆಯಲ್ಲಿ ತಾಪಂ ಇಒ ಮುನಿಯಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

2 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago