ಕೋಲಾರ: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಬಂದಿದೆ ನಾವೇ ವಾರಕ್ಕೊಮ್ಮೆ ಶಾಲೆಗಳಿಗೆ ಭೇಟಿ ನೀಡಲಿದ್ದೇವೆ ಏನಾದರೂ ತಪ್ಪು ನಡೆದರೆ ಸ್ಥಳದಲ್ಲಿಯೇ ಶಿಸ್ತು ಕ್ರಮಕ್ಕೆ ಆದೇಶಿಸಲಾಗುತ್ತದೆ ತಪ್ಪು ನಡೆಯದ ರೀತಿಯಲ್ಲಿ ಕೆಲಸ ಮಾಡಿ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಾಲೆಗಳಲ್ಲಿ ಮಕ್ಕಳಿಗೆ ಓದಲು ಬರೆಯಲು ಪೂರಕವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಜೊತೆಗೆ ಮಧ್ಯಾಹ್ನದ ಬಿಸಿಯೂಟ ಗುಣಮಟ್ಟದಿಂದ ಇರಬೇಕು ಶಾಲೆಯಲ್ಲಿಯೇ ಶಿಕ್ಷಕರು ಕೂಡ ಬಿಸಿಯೂಟ ಕಡ್ಡಾಯವಾಗಿ ಮಾಡಬೇಕು ಖುದ್ದು ಭೇಟಿ ಮಾಡತ್ತೇವೆ ಸಿಕ್ಕಿಬಿದ್ದರೆ ಕ್ರಮ ಗ್ಯಾರಂಟಿ ಎಂದು ತಿಳಿಸಿದರು
ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿಯೊಂದು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಮತ್ತು ಜಾಗ ಇರುವ ರೀತಿಯಲ್ಲಿ ಮಾಡುತ್ತಿದ್ದೇವೆ ಅಂಗನವಾಡಿ ಶಿಕ್ಷಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಹತ್ವವನ್ನು ಕೊಡಬೇಕಾಗಿದೆ ಅವರಿಗೆ ಮುಂದಿನ ಭವಿಷ್ಯವನ್ನು ಕಾಣುವಂತೆ ಮಾಡುವ ಜಾಗವಾಗಿದೆ ಕೆಲವು ಕಡೆ ದೇವಸ್ಥಾನಗಳಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿವೆ ಅಂತಹ ಸಂದರ್ಭಗಳು ಬಂದರೆ ಭಾಗಿಯಾದ ಅಷ್ಟು ಜನರ ಮೇಲೆ ದೂರು ದಾಖಲಿಸಿ ಬಾಲ್ಯ ವಿವಾಹ ಮಾಡಿಸಿ ಸಿಲುಕಿಸಿಕೊಂಡರೆ ಅಂತಹವರಿಗೆ ಕಠಿಣ ಕ್ರಮ ಕೈಗೊಳ್ಳುವುದು ಗ್ಯಾರಂಟಿ ಎಂದರು.
ಸುಮಾರು ಏಳು ಎಂಟು ತಿಂಗಳ ಹಿಂದೆ ಜೆಜೆಎಂ ಯೋಜನೆಯಲ್ಲಿ ಕುಡಿಯುವ ನೀರಿಗೆ ರಸ್ತೆ ಅಗೆದು ಹಾಗೇ ಬಿಡಲಾಗಿದೆ ಇದರಿಂದಾಗಿ ಮಕ್ಕಳು, ಹಿರಿಯರು, ಜಾನುವಾರುಗಳು ಬಿದ್ದು ಗಾಯಗಳಾಗಿವೆ ಜನರಿಗೆ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗಿದೆ ಕೂಡಲೇ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರು ಕೊಡುವ ಕೆಲಸವನ್ನು ಮಾಡಬೇಕು ಎಂದರು ಇದಕ್ಕೆ ಉತ್ತರಿಸಿದ ಅಧಿಕಾರಿ ಜೆಜೆಎಂ ಯೋಜನೆಯಲ್ಲಿ 309 ಹಳ್ಳಿಯಲ್ಲಿ ಕಾಮಗಾರಿ ನಡೆಯುತ್ತಿದೆ ಪರೀಕ್ಷಾ ವರದಿ ಬರುವವೆರೆಗೆ ಕಾಮಗಾರಿ ಪೂರ್ಣಗೊಳಿಸಲು ಆಗುತ್ತಿಲ್ಲ ಆರೇಳು ತಿಂಗಳು ಹಿಡಿಯುತ್ತದೆ. ವಿಳಂಬ ಮಾಡುತ್ತಿದ್ದಾರೆ ಆದಷ್ಟು ಬೇಗ ಮುಗಿಸಲು ಕ್ರಮ ವಹಿಸುತ್ತೇವೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಗೆ ಹಣ ಕೊರತೆ ಎಲ್ಲಾ ಹಣವನ್ನು ಗ್ಯಾರಂಟಿಗಳಿಗೆ ಬಳಕೆಯಾಗಿದೆ ಎಂದು ವಿರೋಧಿಗಳು ಹೊರಗಡೆ ಅಪಪ್ರಚಾರ ಮಾಡತ್ತಾರೆ ಅವರಿಗೆ ಉತ್ತರವನ್ನು ನೀವುಗಳೇ ಕೊಡಬೇಕಾಗಿದೆ ಕೋಲಾರ ಕ್ಷೇತ್ರಕ್ಕೆ 400 ಕೋಟಿ ಅನುದಾನ ಬಂದಿದೆ ಇನ್ನೂ ಬರುತ್ತೇವೆ ಕೇಳಿದಷ್ಟು ಹಣ ಕೊಡಕ್ಕೆ ಸರಕಾರ ಬದ್ದವಾಗಿದೆ ಅಭಿವೃದ್ಧಿ ಮಾಡಲು ನೀವುಗಳು ಸಿದ್ದರಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಮುಂದಿನ ಬಾರಿ ನಡೆಯುವ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಬೇರೆ ಯಾರೂ ಕೂಡ ಸಭೆ ಇಟ್ಟುಕೊಳ್ಳಬಾರದು ಅಧಿಕಾರಿಗಳು ಮಧ್ಯೆ ಎದ್ದು ಹೋಗುತ್ತಾರೆ ಮತ್ತೊಂದು ಸಭೆ ಇದೆ ಎಂದು ಈ ಸಭೆಗೆ ಬರಲ್ಲ ಜೊತೆಗೆ ಇವತ್ತು ಕಾರಣ ಕೊಡದೇ ಯಾರು ಸಭೆಗೆ ಬಂದಿಲ್ಲ ಅಂತಹ ಅಧಿಕಾರಿಗಳಿಗೆ ನೋಟೀಸ್ ನೀಡಿ ಕ್ರಮ ಕೈಗೊಳ್ಳಲು ಸೂಚಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಸರಕಾರವು ಅಭಿವೃದ್ಧಿಗೆ ಬದ್ದವಾಗಿ ಕೆಲಸ ಮಾಡತ್ತಿದೆ ಕೆಲವು ಕಡೆಗಳಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಕಾಮಗಾರಿ ನಡೆಸದೇ ಇರುವುದು ಸರಿಯಲ್ಲ ಕೂಡಲೇ ಕಾಮಗಾರಿ ಪ್ರಾರಂಭ ಮಾಡಬೇಕು ಕಾಮಗಾರಿ ನಡೆಯುವ ಕಡೆ ಬೇಗ ಮುಗಿಸುವ ಕೆಲಸ ಮಾಡಬೇಕು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವ ಗ್ರಾಮದಲ್ಲಿ ಶುದ್ದ ನೀರಿನ ಘಟಕಗಳು ಹಾಗೂ ಹೈ ಮಾಸ್ಕ್ ಲೈಟ್ ಗಳು ಇಲ್ಲವೋ ಅಂತಹ ಗ್ರಾಮಗಳನ್ನು ಪಟ್ಟಿ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…
ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…
ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…
ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…