ಕೋಲಾರ: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಬಂದಿದೆ ನಾವೇ ವಾರಕ್ಕೊಮ್ಮೆ ಶಾಲೆಗಳಿಗೆ ಭೇಟಿ ನೀಡಲಿದ್ದೇವೆ ಏನಾದರೂ ತಪ್ಪು ನಡೆದರೆ ಸ್ಥಳದಲ್ಲಿಯೇ ಶಿಸ್ತು ಕ್ರಮಕ್ಕೆ ಆದೇಶಿಸಲಾಗುತ್ತದೆ ತಪ್ಪು ನಡೆಯದ ರೀತಿಯಲ್ಲಿ ಕೆಲಸ ಮಾಡಿ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಾಲೆಗಳಲ್ಲಿ ಮಕ್ಕಳಿಗೆ ಓದಲು ಬರೆಯಲು ಪೂರಕವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಜೊತೆಗೆ ಮಧ್ಯಾಹ್ನದ ಬಿಸಿಯೂಟ ಗುಣಮಟ್ಟದಿಂದ ಇರಬೇಕು ಶಾಲೆಯಲ್ಲಿಯೇ ಶಿಕ್ಷಕರು ಕೂಡ ಬಿಸಿಯೂಟ ಕಡ್ಡಾಯವಾಗಿ ಮಾಡಬೇಕು ಖುದ್ದು ಭೇಟಿ ಮಾಡತ್ತೇವೆ ಸಿಕ್ಕಿಬಿದ್ದರೆ ಕ್ರಮ ಗ್ಯಾರಂಟಿ ಎಂದು ತಿಳಿಸಿದರು
ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿಯೊಂದು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಮತ್ತು ಜಾಗ ಇರುವ ರೀತಿಯಲ್ಲಿ ಮಾಡುತ್ತಿದ್ದೇವೆ ಅಂಗನವಾಡಿ ಶಿಕ್ಷಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಹತ್ವವನ್ನು ಕೊಡಬೇಕಾಗಿದೆ ಅವರಿಗೆ ಮುಂದಿನ ಭವಿಷ್ಯವನ್ನು ಕಾಣುವಂತೆ ಮಾಡುವ ಜಾಗವಾಗಿದೆ ಕೆಲವು ಕಡೆ ದೇವಸ್ಥಾನಗಳಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿವೆ ಅಂತಹ ಸಂದರ್ಭಗಳು ಬಂದರೆ ಭಾಗಿಯಾದ ಅಷ್ಟು ಜನರ ಮೇಲೆ ದೂರು ದಾಖಲಿಸಿ ಬಾಲ್ಯ ವಿವಾಹ ಮಾಡಿಸಿ ಸಿಲುಕಿಸಿಕೊಂಡರೆ ಅಂತಹವರಿಗೆ ಕಠಿಣ ಕ್ರಮ ಕೈಗೊಳ್ಳುವುದು ಗ್ಯಾರಂಟಿ ಎಂದರು.
ಸುಮಾರು ಏಳು ಎಂಟು ತಿಂಗಳ ಹಿಂದೆ ಜೆಜೆಎಂ ಯೋಜನೆಯಲ್ಲಿ ಕುಡಿಯುವ ನೀರಿಗೆ ರಸ್ತೆ ಅಗೆದು ಹಾಗೇ ಬಿಡಲಾಗಿದೆ ಇದರಿಂದಾಗಿ ಮಕ್ಕಳು, ಹಿರಿಯರು, ಜಾನುವಾರುಗಳು ಬಿದ್ದು ಗಾಯಗಳಾಗಿವೆ ಜನರಿಗೆ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗಿದೆ ಕೂಡಲೇ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರು ಕೊಡುವ ಕೆಲಸವನ್ನು ಮಾಡಬೇಕು ಎಂದರು ಇದಕ್ಕೆ ಉತ್ತರಿಸಿದ ಅಧಿಕಾರಿ ಜೆಜೆಎಂ ಯೋಜನೆಯಲ್ಲಿ 309 ಹಳ್ಳಿಯಲ್ಲಿ ಕಾಮಗಾರಿ ನಡೆಯುತ್ತಿದೆ ಪರೀಕ್ಷಾ ವರದಿ ಬರುವವೆರೆಗೆ ಕಾಮಗಾರಿ ಪೂರ್ಣಗೊಳಿಸಲು ಆಗುತ್ತಿಲ್ಲ ಆರೇಳು ತಿಂಗಳು ಹಿಡಿಯುತ್ತದೆ. ವಿಳಂಬ ಮಾಡುತ್ತಿದ್ದಾರೆ ಆದಷ್ಟು ಬೇಗ ಮುಗಿಸಲು ಕ್ರಮ ವಹಿಸುತ್ತೇವೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಗೆ ಹಣ ಕೊರತೆ ಎಲ್ಲಾ ಹಣವನ್ನು ಗ್ಯಾರಂಟಿಗಳಿಗೆ ಬಳಕೆಯಾಗಿದೆ ಎಂದು ವಿರೋಧಿಗಳು ಹೊರಗಡೆ ಅಪಪ್ರಚಾರ ಮಾಡತ್ತಾರೆ ಅವರಿಗೆ ಉತ್ತರವನ್ನು ನೀವುಗಳೇ ಕೊಡಬೇಕಾಗಿದೆ ಕೋಲಾರ ಕ್ಷೇತ್ರಕ್ಕೆ 400 ಕೋಟಿ ಅನುದಾನ ಬಂದಿದೆ ಇನ್ನೂ ಬರುತ್ತೇವೆ ಕೇಳಿದಷ್ಟು ಹಣ ಕೊಡಕ್ಕೆ ಸರಕಾರ ಬದ್ದವಾಗಿದೆ ಅಭಿವೃದ್ಧಿ ಮಾಡಲು ನೀವುಗಳು ಸಿದ್ದರಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಮುಂದಿನ ಬಾರಿ ನಡೆಯುವ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಬೇರೆ ಯಾರೂ ಕೂಡ ಸಭೆ ಇಟ್ಟುಕೊಳ್ಳಬಾರದು ಅಧಿಕಾರಿಗಳು ಮಧ್ಯೆ ಎದ್ದು ಹೋಗುತ್ತಾರೆ ಮತ್ತೊಂದು ಸಭೆ ಇದೆ ಎಂದು ಈ ಸಭೆಗೆ ಬರಲ್ಲ ಜೊತೆಗೆ ಇವತ್ತು ಕಾರಣ ಕೊಡದೇ ಯಾರು ಸಭೆಗೆ ಬಂದಿಲ್ಲ ಅಂತಹ ಅಧಿಕಾರಿಗಳಿಗೆ ನೋಟೀಸ್ ನೀಡಿ ಕ್ರಮ ಕೈಗೊಳ್ಳಲು ಸೂಚಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಸರಕಾರವು ಅಭಿವೃದ್ಧಿಗೆ ಬದ್ದವಾಗಿ ಕೆಲಸ ಮಾಡತ್ತಿದೆ ಕೆಲವು ಕಡೆಗಳಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಕಾಮಗಾರಿ ನಡೆಸದೇ ಇರುವುದು ಸರಿಯಲ್ಲ ಕೂಡಲೇ ಕಾಮಗಾರಿ ಪ್ರಾರಂಭ ಮಾಡಬೇಕು ಕಾಮಗಾರಿ ನಡೆಯುವ ಕಡೆ ಬೇಗ ಮುಗಿಸುವ ಕೆಲಸ ಮಾಡಬೇಕು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವ ಗ್ರಾಮದಲ್ಲಿ ಶುದ್ದ ನೀರಿನ ಘಟಕಗಳು ಹಾಗೂ ಹೈ ಮಾಸ್ಕ್ ಲೈಟ್ ಗಳು ಇಲ್ಲವೋ ಅಂತಹ ಗ್ರಾಮಗಳನ್ನು ಪಟ್ಟಿ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…