Categories: ಕೋಲಾರ

ಶಾಲೆಗಳಲ್ಲಿ ಬಿಸಿಯೂಟ ಗುಣಮಟ್ಟದಿಂದ ಇರಬೇಕು ದೂರು ಬಂದು ಸಿಕ್ಕಿಬಿದ್ದರೆ ಶಿಸ್ತು ಕ್ರಮ ಗ್ಯಾರಂಟಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಬಂದಿದೆ ನಾವೇ ವಾರಕ್ಕೊಮ್ಮೆ ಶಾಲೆಗಳಿಗೆ ಭೇಟಿ ನೀಡಲಿದ್ದೇವೆ ಏನಾದರೂ ತಪ್ಪು ನಡೆದರೆ ಸ್ಥಳದಲ್ಲಿಯೇ ಶಿಸ್ತು ಕ್ರಮಕ್ಕೆ ಆದೇಶಿಸಲಾಗುತ್ತದೆ ತಪ್ಪು ನಡೆಯದ ರೀತಿಯಲ್ಲಿ ಕೆಲಸ ಮಾಡಿ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಾಲೆಗಳಲ್ಲಿ ಮಕ್ಕಳಿಗೆ ಓದಲು ಬರೆಯಲು ಪೂರಕವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಜೊತೆಗೆ ಮಧ್ಯಾಹ್ನದ ಬಿಸಿಯೂಟ ಗುಣಮಟ್ಟದಿಂದ ಇರಬೇಕು ಶಾಲೆಯಲ್ಲಿಯೇ ಶಿಕ್ಷಕರು ಕೂಡ ಬಿಸಿಯೂಟ ಕಡ್ಡಾಯವಾಗಿ ಮಾಡಬೇಕು ಖುದ್ದು ಭೇಟಿ ಮಾಡತ್ತೇವೆ ಸಿಕ್ಕಿಬಿದ್ದರೆ ಕ್ರಮ ಗ್ಯಾರಂಟಿ ಎಂದು ತಿಳಿಸಿದರು

ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿಯೊಂದು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಮತ್ತು ಜಾಗ ಇರುವ ರೀತಿಯಲ್ಲಿ ಮಾಡುತ್ತಿದ್ದೇವೆ ಅಂಗನವಾಡಿ‌ ಶಿಕ್ಷಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಹತ್ವವನ್ನು ಕೊಡಬೇಕಾಗಿದೆ ಅವರಿಗೆ ಮುಂದಿನ ಭವಿಷ್ಯವನ್ನು ಕಾಣುವಂತೆ ಮಾಡುವ ಜಾಗವಾಗಿದೆ ಕೆಲವು ಕಡೆ ದೇವಸ್ಥಾನಗಳಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿವೆ ಅಂತಹ ಸಂದರ್ಭಗಳು ಬಂದರೆ ಭಾಗಿಯಾದ ಅಷ್ಟು ಜನರ ಮೇಲೆ ದೂರು ದಾಖಲಿಸಿ ಬಾಲ್ಯ ವಿವಾಹ ಮಾಡಿಸಿ‌ ಸಿಲುಕಿಸಿಕೊಂಡರೆ ಅಂತಹವರಿಗೆ ಕಠಿಣ ಕ್ರಮ ಕೈಗೊಳ್ಳುವುದು ಗ್ಯಾರಂಟಿ ಎಂದರು.

ಸುಮಾರು ಏಳು ಎಂಟು ತಿಂಗಳ ಹಿಂದೆ ಜೆಜೆಎಂ ಯೋಜನೆಯಲ್ಲಿ ಕುಡಿಯುವ ನೀರಿಗೆ ರಸ್ತೆ ಅಗೆದು ಹಾಗೇ ಬಿಡಲಾಗಿದೆ ಇದರಿಂದಾಗಿ ಮಕ್ಕಳು, ಹಿರಿಯರು, ಜಾನುವಾರುಗಳು ಬಿದ್ದು ಗಾಯಗಳಾಗಿವೆ ಜನರಿಗೆ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗಿದೆ ಕೂಡಲೇ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರು ಕೊಡುವ ಕೆಲಸವನ್ನು ಮಾಡಬೇಕು ಎಂದರು ಇದಕ್ಕೆ ಉತ್ತರಿಸಿದ ಅಧಿಕಾರಿ ಜೆಜೆಎಂ ಯೋಜನೆಯಲ್ಲಿ 309 ಹಳ್ಳಿಯಲ್ಲಿ ಕಾಮಗಾರಿ ನಡೆಯುತ್ತಿದೆ ಪರೀಕ್ಷಾ ವರದಿ ಬರುವವೆರೆಗೆ ಕಾಮಗಾರಿ ಪೂರ್ಣಗೊಳಿಸಲು ಆಗುತ್ತಿಲ್ಲ ಆರೇಳು ತಿಂಗಳು ಹಿಡಿಯುತ್ತದೆ‌. ವಿಳಂಬ ಮಾಡುತ್ತಿದ್ದಾರೆ‌ ಆದಷ್ಟು ಬೇಗ ಮುಗಿಸಲು ಕ್ರಮ ವಹಿಸುತ್ತೇವೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಗೆ ಹಣ ಕೊರತೆ ಎಲ್ಲಾ ಹಣವನ್ನು ಗ್ಯಾರಂಟಿಗಳಿಗೆ ಬಳಕೆಯಾಗಿದೆ ಎಂದು ವಿರೋಧಿಗಳು ಹೊರಗಡೆ ಅಪಪ್ರಚಾರ ಮಾಡತ್ತಾರೆ ಅವರಿಗೆ ಉತ್ತರವನ್ನು ನೀವುಗಳೇ ಕೊಡಬೇಕಾಗಿದೆ ಕೋಲಾರ ಕ್ಷೇತ್ರಕ್ಕೆ 400 ಕೋಟಿ ಅನುದಾನ ಬಂದಿದೆ ಇನ್ನೂ ಬರುತ್ತೇವೆ ಕೇಳಿದಷ್ಟು ಹಣ ಕೊಡಕ್ಕೆ ಸರಕಾರ ಬದ್ದವಾಗಿದೆ ಅಭಿವೃದ್ಧಿ ಮಾಡಲು ನೀವುಗಳು ಸಿದ್ದರಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮುಂದಿನ ಬಾರಿ ನಡೆಯುವ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಬೇರೆ ಯಾರೂ ಕೂಡ ಸಭೆ ಇಟ್ಟುಕೊಳ್ಳಬಾರದು‌‌ ಅಧಿಕಾರಿಗಳು ಮಧ್ಯೆ ಎದ್ದು ಹೋಗುತ್ತಾರೆ ಮತ್ತೊಂದು ಸಭೆ ಇದೆ ಎಂದು ಈ ಸಭೆಗೆ ಬರಲ್ಲ ಜೊತೆಗೆ ಇವತ್ತು ಕಾರಣ ಕೊಡದೇ ಯಾರು ಸಭೆಗೆ ಬಂದಿಲ್ಲ ಅಂತಹ ಅಧಿಕಾರಿಗಳಿಗೆ ನೋಟೀಸ್ ನೀಡಿ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಸರಕಾರವು ಅಭಿವೃದ್ಧಿಗೆ ಬದ್ದವಾಗಿ ಕೆಲಸ ಮಾಡತ್ತಿದೆ ಕೆಲವು ಕಡೆಗಳಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಕಾಮಗಾರಿ ನಡೆಸದೇ ಇರುವುದು ಸರಿಯಲ್ಲ ಕೂಡಲೇ ಕಾಮಗಾರಿ ಪ್ರಾರಂಭ ಮಾಡಬೇಕು ಕಾಮಗಾರಿ ನಡೆಯುವ ಕಡೆ ಬೇಗ ಮುಗಿಸುವ ಕೆಲಸ ಮಾಡಬೇಕು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವ ಗ್ರಾಮದಲ್ಲಿ ಶುದ್ದ ನೀರಿನ ಘಟಕಗಳು ಹಾಗೂ ಹೈ ಮಾಸ್ಕ್ ಲೈಟ್ ಗಳು ಇಲ್ಲವೋ ಅಂತಹ ಗ್ರಾಮಗಳನ್ನು ಪಟ್ಟಿ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ ಮೈತ್ರಿ ಮಾತನಾಡಿ ಶಾಲೆಗಳಲ್ಲಿ ಶೌಚಾಲಯ ನೀರು ಸಮಸ್ಯೆ ಇಲ್ಲದಂತೆ ನೋಡಿಕೊಳ್ಳಬೇಕು ವಕ್ಕಲೇರಿ ಹೋಬಳಿಯ ತ್ಯಾವನಹಳ್ಳಿ ಪ್ರೌಢಶಾಲೆಯ ಕಾಂಪೌಂಡ್ ಕಾಮಗಾರಿ‌ಯ ಸಂಬಂಧ ದಾಖಲೆ ಕೊಡಿ ಸರ್ವೇ ಮಾಡೋಣ ಈ ಶಾಲೆಗೆ ನಾನು ಭೇಟಿ ಕೊಡುತ್ತೇನೆ ಹಿಂದುಳಿದ ಹಾಸ್ಟೆಲ್ ‌ಗಳಲ್ಲಿ ಬುಕ್ ಕಾರ್ನರ್ ಇರಬೇಕು. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಪೂರಕವಾಗಿರಬೇಕು. ರೇಷ್ಮೆಯಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನದಲ್ಲಿ ಬರುವಂತೆ ಮಾಡಬೇಕು ಎಂದು ತಿಳಿಸಿದರು ಸಭೆಯಲ್ಲಿ ತಾಪಂ ಇಒ ಮುನಿಯಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 hour ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

12 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

13 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

18 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

20 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

23 hours ago