Categories: ಕೋಲಾರ

ಶಾಲೆಗಳಲ್ಲಿ ಬಿಸಿಯೂಟ ಗುಣಮಟ್ಟದಿಂದ ಇರಬೇಕು ದೂರು ಬಂದು ಸಿಕ್ಕಿಬಿದ್ದರೆ ಶಿಸ್ತು ಕ್ರಮ ಗ್ಯಾರಂಟಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಬಂದಿದೆ ನಾವೇ ವಾರಕ್ಕೊಮ್ಮೆ ಶಾಲೆಗಳಿಗೆ ಭೇಟಿ ನೀಡಲಿದ್ದೇವೆ ಏನಾದರೂ ತಪ್ಪು ನಡೆದರೆ ಸ್ಥಳದಲ್ಲಿಯೇ ಶಿಸ್ತು ಕ್ರಮಕ್ಕೆ ಆದೇಶಿಸಲಾಗುತ್ತದೆ ತಪ್ಪು ನಡೆಯದ ರೀತಿಯಲ್ಲಿ ಕೆಲಸ ಮಾಡಿ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಾಲೆಗಳಲ್ಲಿ ಮಕ್ಕಳಿಗೆ ಓದಲು ಬರೆಯಲು ಪೂರಕವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಜೊತೆಗೆ ಮಧ್ಯಾಹ್ನದ ಬಿಸಿಯೂಟ ಗುಣಮಟ್ಟದಿಂದ ಇರಬೇಕು ಶಾಲೆಯಲ್ಲಿಯೇ ಶಿಕ್ಷಕರು ಕೂಡ ಬಿಸಿಯೂಟ ಕಡ್ಡಾಯವಾಗಿ ಮಾಡಬೇಕು ಖುದ್ದು ಭೇಟಿ ಮಾಡತ್ತೇವೆ ಸಿಕ್ಕಿಬಿದ್ದರೆ ಕ್ರಮ ಗ್ಯಾರಂಟಿ ಎಂದು ತಿಳಿಸಿದರು

ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿಯೊಂದು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಮತ್ತು ಜಾಗ ಇರುವ ರೀತಿಯಲ್ಲಿ ಮಾಡುತ್ತಿದ್ದೇವೆ ಅಂಗನವಾಡಿ‌ ಶಿಕ್ಷಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಹತ್ವವನ್ನು ಕೊಡಬೇಕಾಗಿದೆ ಅವರಿಗೆ ಮುಂದಿನ ಭವಿಷ್ಯವನ್ನು ಕಾಣುವಂತೆ ಮಾಡುವ ಜಾಗವಾಗಿದೆ ಕೆಲವು ಕಡೆ ದೇವಸ್ಥಾನಗಳಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿವೆ ಅಂತಹ ಸಂದರ್ಭಗಳು ಬಂದರೆ ಭಾಗಿಯಾದ ಅಷ್ಟು ಜನರ ಮೇಲೆ ದೂರು ದಾಖಲಿಸಿ ಬಾಲ್ಯ ವಿವಾಹ ಮಾಡಿಸಿ‌ ಸಿಲುಕಿಸಿಕೊಂಡರೆ ಅಂತಹವರಿಗೆ ಕಠಿಣ ಕ್ರಮ ಕೈಗೊಳ್ಳುವುದು ಗ್ಯಾರಂಟಿ ಎಂದರು.

ಸುಮಾರು ಏಳು ಎಂಟು ತಿಂಗಳ ಹಿಂದೆ ಜೆಜೆಎಂ ಯೋಜನೆಯಲ್ಲಿ ಕುಡಿಯುವ ನೀರಿಗೆ ರಸ್ತೆ ಅಗೆದು ಹಾಗೇ ಬಿಡಲಾಗಿದೆ ಇದರಿಂದಾಗಿ ಮಕ್ಕಳು, ಹಿರಿಯರು, ಜಾನುವಾರುಗಳು ಬಿದ್ದು ಗಾಯಗಳಾಗಿವೆ ಜನರಿಗೆ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗಿದೆ ಕೂಡಲೇ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರು ಕೊಡುವ ಕೆಲಸವನ್ನು ಮಾಡಬೇಕು ಎಂದರು ಇದಕ್ಕೆ ಉತ್ತರಿಸಿದ ಅಧಿಕಾರಿ ಜೆಜೆಎಂ ಯೋಜನೆಯಲ್ಲಿ 309 ಹಳ್ಳಿಯಲ್ಲಿ ಕಾಮಗಾರಿ ನಡೆಯುತ್ತಿದೆ ಪರೀಕ್ಷಾ ವರದಿ ಬರುವವೆರೆಗೆ ಕಾಮಗಾರಿ ಪೂರ್ಣಗೊಳಿಸಲು ಆಗುತ್ತಿಲ್ಲ ಆರೇಳು ತಿಂಗಳು ಹಿಡಿಯುತ್ತದೆ‌. ವಿಳಂಬ ಮಾಡುತ್ತಿದ್ದಾರೆ‌ ಆದಷ್ಟು ಬೇಗ ಮುಗಿಸಲು ಕ್ರಮ ವಹಿಸುತ್ತೇವೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಗೆ ಹಣ ಕೊರತೆ ಎಲ್ಲಾ ಹಣವನ್ನು ಗ್ಯಾರಂಟಿಗಳಿಗೆ ಬಳಕೆಯಾಗಿದೆ ಎಂದು ವಿರೋಧಿಗಳು ಹೊರಗಡೆ ಅಪಪ್ರಚಾರ ಮಾಡತ್ತಾರೆ ಅವರಿಗೆ ಉತ್ತರವನ್ನು ನೀವುಗಳೇ ಕೊಡಬೇಕಾಗಿದೆ ಕೋಲಾರ ಕ್ಷೇತ್ರಕ್ಕೆ 400 ಕೋಟಿ ಅನುದಾನ ಬಂದಿದೆ ಇನ್ನೂ ಬರುತ್ತೇವೆ ಕೇಳಿದಷ್ಟು ಹಣ ಕೊಡಕ್ಕೆ ಸರಕಾರ ಬದ್ದವಾಗಿದೆ ಅಭಿವೃದ್ಧಿ ಮಾಡಲು ನೀವುಗಳು ಸಿದ್ದರಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮುಂದಿನ ಬಾರಿ ನಡೆಯುವ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಬೇರೆ ಯಾರೂ ಕೂಡ ಸಭೆ ಇಟ್ಟುಕೊಳ್ಳಬಾರದು‌‌ ಅಧಿಕಾರಿಗಳು ಮಧ್ಯೆ ಎದ್ದು ಹೋಗುತ್ತಾರೆ ಮತ್ತೊಂದು ಸಭೆ ಇದೆ ಎಂದು ಈ ಸಭೆಗೆ ಬರಲ್ಲ ಜೊತೆಗೆ ಇವತ್ತು ಕಾರಣ ಕೊಡದೇ ಯಾರು ಸಭೆಗೆ ಬಂದಿಲ್ಲ ಅಂತಹ ಅಧಿಕಾರಿಗಳಿಗೆ ನೋಟೀಸ್ ನೀಡಿ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಸರಕಾರವು ಅಭಿವೃದ್ಧಿಗೆ ಬದ್ದವಾಗಿ ಕೆಲಸ ಮಾಡತ್ತಿದೆ ಕೆಲವು ಕಡೆಗಳಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಕಾಮಗಾರಿ ನಡೆಸದೇ ಇರುವುದು ಸರಿಯಲ್ಲ ಕೂಡಲೇ ಕಾಮಗಾರಿ ಪ್ರಾರಂಭ ಮಾಡಬೇಕು ಕಾಮಗಾರಿ ನಡೆಯುವ ಕಡೆ ಬೇಗ ಮುಗಿಸುವ ಕೆಲಸ ಮಾಡಬೇಕು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವ ಗ್ರಾಮದಲ್ಲಿ ಶುದ್ದ ನೀರಿನ ಘಟಕಗಳು ಹಾಗೂ ಹೈ ಮಾಸ್ಕ್ ಲೈಟ್ ಗಳು ಇಲ್ಲವೋ ಅಂತಹ ಗ್ರಾಮಗಳನ್ನು ಪಟ್ಟಿ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ ಮೈತ್ರಿ ಮಾತನಾಡಿ ಶಾಲೆಗಳಲ್ಲಿ ಶೌಚಾಲಯ ನೀರು ಸಮಸ್ಯೆ ಇಲ್ಲದಂತೆ ನೋಡಿಕೊಳ್ಳಬೇಕು ವಕ್ಕಲೇರಿ ಹೋಬಳಿಯ ತ್ಯಾವನಹಳ್ಳಿ ಪ್ರೌಢಶಾಲೆಯ ಕಾಂಪೌಂಡ್ ಕಾಮಗಾರಿ‌ಯ ಸಂಬಂಧ ದಾಖಲೆ ಕೊಡಿ ಸರ್ವೇ ಮಾಡೋಣ ಈ ಶಾಲೆಗೆ ನಾನು ಭೇಟಿ ಕೊಡುತ್ತೇನೆ ಹಿಂದುಳಿದ ಹಾಸ್ಟೆಲ್ ‌ಗಳಲ್ಲಿ ಬುಕ್ ಕಾರ್ನರ್ ಇರಬೇಕು. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಪೂರಕವಾಗಿರಬೇಕು. ರೇಷ್ಮೆಯಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನದಲ್ಲಿ ಬರುವಂತೆ ಮಾಡಬೇಕು ಎಂದು ತಿಳಿಸಿದರು ಸಭೆಯಲ್ಲಿ ತಾಪಂ ಇಒ ಮುನಿಯಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

6 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

9 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

9 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

12 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

14 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

1 day ago