Categories: ಕೋಲಾರ

ಶಾಲೆಗಳಲ್ಲಿ ಬಿಸಿಯೂಟ ಗುಣಮಟ್ಟದಿಂದ ಇರಬೇಕು ದೂರು ಬಂದು ಸಿಕ್ಕಿಬಿದ್ದರೆ ಶಿಸ್ತು ಕ್ರಮ ಗ್ಯಾರಂಟಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಬಂದಿದೆ ನಾವೇ ವಾರಕ್ಕೊಮ್ಮೆ ಶಾಲೆಗಳಿಗೆ ಭೇಟಿ ನೀಡಲಿದ್ದೇವೆ ಏನಾದರೂ ತಪ್ಪು ನಡೆದರೆ ಸ್ಥಳದಲ್ಲಿಯೇ ಶಿಸ್ತು ಕ್ರಮಕ್ಕೆ ಆದೇಶಿಸಲಾಗುತ್ತದೆ ತಪ್ಪು ನಡೆಯದ ರೀತಿಯಲ್ಲಿ ಕೆಲಸ ಮಾಡಿ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಾಲೆಗಳಲ್ಲಿ ಮಕ್ಕಳಿಗೆ ಓದಲು ಬರೆಯಲು ಪೂರಕವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಜೊತೆಗೆ ಮಧ್ಯಾಹ್ನದ ಬಿಸಿಯೂಟ ಗುಣಮಟ್ಟದಿಂದ ಇರಬೇಕು ಶಾಲೆಯಲ್ಲಿಯೇ ಶಿಕ್ಷಕರು ಕೂಡ ಬಿಸಿಯೂಟ ಕಡ್ಡಾಯವಾಗಿ ಮಾಡಬೇಕು ಖುದ್ದು ಭೇಟಿ ಮಾಡತ್ತೇವೆ ಸಿಕ್ಕಿಬಿದ್ದರೆ ಕ್ರಮ ಗ್ಯಾರಂಟಿ ಎಂದು ತಿಳಿಸಿದರು

ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿಯೊಂದು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಮತ್ತು ಜಾಗ ಇರುವ ರೀತಿಯಲ್ಲಿ ಮಾಡುತ್ತಿದ್ದೇವೆ ಅಂಗನವಾಡಿ‌ ಶಿಕ್ಷಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಹತ್ವವನ್ನು ಕೊಡಬೇಕಾಗಿದೆ ಅವರಿಗೆ ಮುಂದಿನ ಭವಿಷ್ಯವನ್ನು ಕಾಣುವಂತೆ ಮಾಡುವ ಜಾಗವಾಗಿದೆ ಕೆಲವು ಕಡೆ ದೇವಸ್ಥಾನಗಳಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿವೆ ಅಂತಹ ಸಂದರ್ಭಗಳು ಬಂದರೆ ಭಾಗಿಯಾದ ಅಷ್ಟು ಜನರ ಮೇಲೆ ದೂರು ದಾಖಲಿಸಿ ಬಾಲ್ಯ ವಿವಾಹ ಮಾಡಿಸಿ‌ ಸಿಲುಕಿಸಿಕೊಂಡರೆ ಅಂತಹವರಿಗೆ ಕಠಿಣ ಕ್ರಮ ಕೈಗೊಳ್ಳುವುದು ಗ್ಯಾರಂಟಿ ಎಂದರು.

ಸುಮಾರು ಏಳು ಎಂಟು ತಿಂಗಳ ಹಿಂದೆ ಜೆಜೆಎಂ ಯೋಜನೆಯಲ್ಲಿ ಕುಡಿಯುವ ನೀರಿಗೆ ರಸ್ತೆ ಅಗೆದು ಹಾಗೇ ಬಿಡಲಾಗಿದೆ ಇದರಿಂದಾಗಿ ಮಕ್ಕಳು, ಹಿರಿಯರು, ಜಾನುವಾರುಗಳು ಬಿದ್ದು ಗಾಯಗಳಾಗಿವೆ ಜನರಿಗೆ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗಿದೆ ಕೂಡಲೇ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರು ಕೊಡುವ ಕೆಲಸವನ್ನು ಮಾಡಬೇಕು ಎಂದರು ಇದಕ್ಕೆ ಉತ್ತರಿಸಿದ ಅಧಿಕಾರಿ ಜೆಜೆಎಂ ಯೋಜನೆಯಲ್ಲಿ 309 ಹಳ್ಳಿಯಲ್ಲಿ ಕಾಮಗಾರಿ ನಡೆಯುತ್ತಿದೆ ಪರೀಕ್ಷಾ ವರದಿ ಬರುವವೆರೆಗೆ ಕಾಮಗಾರಿ ಪೂರ್ಣಗೊಳಿಸಲು ಆಗುತ್ತಿಲ್ಲ ಆರೇಳು ತಿಂಗಳು ಹಿಡಿಯುತ್ತದೆ‌. ವಿಳಂಬ ಮಾಡುತ್ತಿದ್ದಾರೆ‌ ಆದಷ್ಟು ಬೇಗ ಮುಗಿಸಲು ಕ್ರಮ ವಹಿಸುತ್ತೇವೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಗೆ ಹಣ ಕೊರತೆ ಎಲ್ಲಾ ಹಣವನ್ನು ಗ್ಯಾರಂಟಿಗಳಿಗೆ ಬಳಕೆಯಾಗಿದೆ ಎಂದು ವಿರೋಧಿಗಳು ಹೊರಗಡೆ ಅಪಪ್ರಚಾರ ಮಾಡತ್ತಾರೆ ಅವರಿಗೆ ಉತ್ತರವನ್ನು ನೀವುಗಳೇ ಕೊಡಬೇಕಾಗಿದೆ ಕೋಲಾರ ಕ್ಷೇತ್ರಕ್ಕೆ 400 ಕೋಟಿ ಅನುದಾನ ಬಂದಿದೆ ಇನ್ನೂ ಬರುತ್ತೇವೆ ಕೇಳಿದಷ್ಟು ಹಣ ಕೊಡಕ್ಕೆ ಸರಕಾರ ಬದ್ದವಾಗಿದೆ ಅಭಿವೃದ್ಧಿ ಮಾಡಲು ನೀವುಗಳು ಸಿದ್ದರಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮುಂದಿನ ಬಾರಿ ನಡೆಯುವ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಬೇರೆ ಯಾರೂ ಕೂಡ ಸಭೆ ಇಟ್ಟುಕೊಳ್ಳಬಾರದು‌‌ ಅಧಿಕಾರಿಗಳು ಮಧ್ಯೆ ಎದ್ದು ಹೋಗುತ್ತಾರೆ ಮತ್ತೊಂದು ಸಭೆ ಇದೆ ಎಂದು ಈ ಸಭೆಗೆ ಬರಲ್ಲ ಜೊತೆಗೆ ಇವತ್ತು ಕಾರಣ ಕೊಡದೇ ಯಾರು ಸಭೆಗೆ ಬಂದಿಲ್ಲ ಅಂತಹ ಅಧಿಕಾರಿಗಳಿಗೆ ನೋಟೀಸ್ ನೀಡಿ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಸರಕಾರವು ಅಭಿವೃದ್ಧಿಗೆ ಬದ್ದವಾಗಿ ಕೆಲಸ ಮಾಡತ್ತಿದೆ ಕೆಲವು ಕಡೆಗಳಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಕಾಮಗಾರಿ ನಡೆಸದೇ ಇರುವುದು ಸರಿಯಲ್ಲ ಕೂಡಲೇ ಕಾಮಗಾರಿ ಪ್ರಾರಂಭ ಮಾಡಬೇಕು ಕಾಮಗಾರಿ ನಡೆಯುವ ಕಡೆ ಬೇಗ ಮುಗಿಸುವ ಕೆಲಸ ಮಾಡಬೇಕು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವ ಗ್ರಾಮದಲ್ಲಿ ಶುದ್ದ ನೀರಿನ ಘಟಕಗಳು ಹಾಗೂ ಹೈ ಮಾಸ್ಕ್ ಲೈಟ್ ಗಳು ಇಲ್ಲವೋ ಅಂತಹ ಗ್ರಾಮಗಳನ್ನು ಪಟ್ಟಿ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ ಮೈತ್ರಿ ಮಾತನಾಡಿ ಶಾಲೆಗಳಲ್ಲಿ ಶೌಚಾಲಯ ನೀರು ಸಮಸ್ಯೆ ಇಲ್ಲದಂತೆ ನೋಡಿಕೊಳ್ಳಬೇಕು ವಕ್ಕಲೇರಿ ಹೋಬಳಿಯ ತ್ಯಾವನಹಳ್ಳಿ ಪ್ರೌಢಶಾಲೆಯ ಕಾಂಪೌಂಡ್ ಕಾಮಗಾರಿ‌ಯ ಸಂಬಂಧ ದಾಖಲೆ ಕೊಡಿ ಸರ್ವೇ ಮಾಡೋಣ ಈ ಶಾಲೆಗೆ ನಾನು ಭೇಟಿ ಕೊಡುತ್ತೇನೆ ಹಿಂದುಳಿದ ಹಾಸ್ಟೆಲ್ ‌ಗಳಲ್ಲಿ ಬುಕ್ ಕಾರ್ನರ್ ಇರಬೇಕು. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಪೂರಕವಾಗಿರಬೇಕು. ರೇಷ್ಮೆಯಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನದಲ್ಲಿ ಬರುವಂತೆ ಮಾಡಬೇಕು ಎಂದು ತಿಳಿಸಿದರು ಸಭೆಯಲ್ಲಿ ತಾಪಂ ಇಒ ಮುನಿಯಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago