Categories: ಕೋಲಾರ

ಶಾಲೆಗಳಲ್ಲಿ ಬಿಸಿಯೂಟ ಗುಣಮಟ್ಟದಿಂದ ಇರಬೇಕು ದೂರು ಬಂದು ಸಿಕ್ಕಿಬಿದ್ದರೆ ಶಿಸ್ತು ಕ್ರಮ ಗ್ಯಾರಂಟಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಬಂದಿದೆ ನಾವೇ ವಾರಕ್ಕೊಮ್ಮೆ ಶಾಲೆಗಳಿಗೆ ಭೇಟಿ ನೀಡಲಿದ್ದೇವೆ ಏನಾದರೂ ತಪ್ಪು ನಡೆದರೆ ಸ್ಥಳದಲ್ಲಿಯೇ ಶಿಸ್ತು ಕ್ರಮಕ್ಕೆ ಆದೇಶಿಸಲಾಗುತ್ತದೆ ತಪ್ಪು ನಡೆಯದ ರೀತಿಯಲ್ಲಿ ಕೆಲಸ ಮಾಡಿ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಾಲೆಗಳಲ್ಲಿ ಮಕ್ಕಳಿಗೆ ಓದಲು ಬರೆಯಲು ಪೂರಕವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಜೊತೆಗೆ ಮಧ್ಯಾಹ್ನದ ಬಿಸಿಯೂಟ ಗುಣಮಟ್ಟದಿಂದ ಇರಬೇಕು ಶಾಲೆಯಲ್ಲಿಯೇ ಶಿಕ್ಷಕರು ಕೂಡ ಬಿಸಿಯೂಟ ಕಡ್ಡಾಯವಾಗಿ ಮಾಡಬೇಕು ಖುದ್ದು ಭೇಟಿ ಮಾಡತ್ತೇವೆ ಸಿಕ್ಕಿಬಿದ್ದರೆ ಕ್ರಮ ಗ್ಯಾರಂಟಿ ಎಂದು ತಿಳಿಸಿದರು

ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿಯೊಂದು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಮತ್ತು ಜಾಗ ಇರುವ ರೀತಿಯಲ್ಲಿ ಮಾಡುತ್ತಿದ್ದೇವೆ ಅಂಗನವಾಡಿ‌ ಶಿಕ್ಷಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಹತ್ವವನ್ನು ಕೊಡಬೇಕಾಗಿದೆ ಅವರಿಗೆ ಮುಂದಿನ ಭವಿಷ್ಯವನ್ನು ಕಾಣುವಂತೆ ಮಾಡುವ ಜಾಗವಾಗಿದೆ ಕೆಲವು ಕಡೆ ದೇವಸ್ಥಾನಗಳಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿವೆ ಅಂತಹ ಸಂದರ್ಭಗಳು ಬಂದರೆ ಭಾಗಿಯಾದ ಅಷ್ಟು ಜನರ ಮೇಲೆ ದೂರು ದಾಖಲಿಸಿ ಬಾಲ್ಯ ವಿವಾಹ ಮಾಡಿಸಿ‌ ಸಿಲುಕಿಸಿಕೊಂಡರೆ ಅಂತಹವರಿಗೆ ಕಠಿಣ ಕ್ರಮ ಕೈಗೊಳ್ಳುವುದು ಗ್ಯಾರಂಟಿ ಎಂದರು.

ಸುಮಾರು ಏಳು ಎಂಟು ತಿಂಗಳ ಹಿಂದೆ ಜೆಜೆಎಂ ಯೋಜನೆಯಲ್ಲಿ ಕುಡಿಯುವ ನೀರಿಗೆ ರಸ್ತೆ ಅಗೆದು ಹಾಗೇ ಬಿಡಲಾಗಿದೆ ಇದರಿಂದಾಗಿ ಮಕ್ಕಳು, ಹಿರಿಯರು, ಜಾನುವಾರುಗಳು ಬಿದ್ದು ಗಾಯಗಳಾಗಿವೆ ಜನರಿಗೆ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗಿದೆ ಕೂಡಲೇ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರು ಕೊಡುವ ಕೆಲಸವನ್ನು ಮಾಡಬೇಕು ಎಂದರು ಇದಕ್ಕೆ ಉತ್ತರಿಸಿದ ಅಧಿಕಾರಿ ಜೆಜೆಎಂ ಯೋಜನೆಯಲ್ಲಿ 309 ಹಳ್ಳಿಯಲ್ಲಿ ಕಾಮಗಾರಿ ನಡೆಯುತ್ತಿದೆ ಪರೀಕ್ಷಾ ವರದಿ ಬರುವವೆರೆಗೆ ಕಾಮಗಾರಿ ಪೂರ್ಣಗೊಳಿಸಲು ಆಗುತ್ತಿಲ್ಲ ಆರೇಳು ತಿಂಗಳು ಹಿಡಿಯುತ್ತದೆ‌. ವಿಳಂಬ ಮಾಡುತ್ತಿದ್ದಾರೆ‌ ಆದಷ್ಟು ಬೇಗ ಮುಗಿಸಲು ಕ್ರಮ ವಹಿಸುತ್ತೇವೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಗೆ ಹಣ ಕೊರತೆ ಎಲ್ಲಾ ಹಣವನ್ನು ಗ್ಯಾರಂಟಿಗಳಿಗೆ ಬಳಕೆಯಾಗಿದೆ ಎಂದು ವಿರೋಧಿಗಳು ಹೊರಗಡೆ ಅಪಪ್ರಚಾರ ಮಾಡತ್ತಾರೆ ಅವರಿಗೆ ಉತ್ತರವನ್ನು ನೀವುಗಳೇ ಕೊಡಬೇಕಾಗಿದೆ ಕೋಲಾರ ಕ್ಷೇತ್ರಕ್ಕೆ 400 ಕೋಟಿ ಅನುದಾನ ಬಂದಿದೆ ಇನ್ನೂ ಬರುತ್ತೇವೆ ಕೇಳಿದಷ್ಟು ಹಣ ಕೊಡಕ್ಕೆ ಸರಕಾರ ಬದ್ದವಾಗಿದೆ ಅಭಿವೃದ್ಧಿ ಮಾಡಲು ನೀವುಗಳು ಸಿದ್ದರಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮುಂದಿನ ಬಾರಿ ನಡೆಯುವ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಬೇರೆ ಯಾರೂ ಕೂಡ ಸಭೆ ಇಟ್ಟುಕೊಳ್ಳಬಾರದು‌‌ ಅಧಿಕಾರಿಗಳು ಮಧ್ಯೆ ಎದ್ದು ಹೋಗುತ್ತಾರೆ ಮತ್ತೊಂದು ಸಭೆ ಇದೆ ಎಂದು ಈ ಸಭೆಗೆ ಬರಲ್ಲ ಜೊತೆಗೆ ಇವತ್ತು ಕಾರಣ ಕೊಡದೇ ಯಾರು ಸಭೆಗೆ ಬಂದಿಲ್ಲ ಅಂತಹ ಅಧಿಕಾರಿಗಳಿಗೆ ನೋಟೀಸ್ ನೀಡಿ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಸರಕಾರವು ಅಭಿವೃದ್ಧಿಗೆ ಬದ್ದವಾಗಿ ಕೆಲಸ ಮಾಡತ್ತಿದೆ ಕೆಲವು ಕಡೆಗಳಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಕಾಮಗಾರಿ ನಡೆಸದೇ ಇರುವುದು ಸರಿಯಲ್ಲ ಕೂಡಲೇ ಕಾಮಗಾರಿ ಪ್ರಾರಂಭ ಮಾಡಬೇಕು ಕಾಮಗಾರಿ ನಡೆಯುವ ಕಡೆ ಬೇಗ ಮುಗಿಸುವ ಕೆಲಸ ಮಾಡಬೇಕು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವ ಗ್ರಾಮದಲ್ಲಿ ಶುದ್ದ ನೀರಿನ ಘಟಕಗಳು ಹಾಗೂ ಹೈ ಮಾಸ್ಕ್ ಲೈಟ್ ಗಳು ಇಲ್ಲವೋ ಅಂತಹ ಗ್ರಾಮಗಳನ್ನು ಪಟ್ಟಿ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ ಮೈತ್ರಿ ಮಾತನಾಡಿ ಶಾಲೆಗಳಲ್ಲಿ ಶೌಚಾಲಯ ನೀರು ಸಮಸ್ಯೆ ಇಲ್ಲದಂತೆ ನೋಡಿಕೊಳ್ಳಬೇಕು ವಕ್ಕಲೇರಿ ಹೋಬಳಿಯ ತ್ಯಾವನಹಳ್ಳಿ ಪ್ರೌಢಶಾಲೆಯ ಕಾಂಪೌಂಡ್ ಕಾಮಗಾರಿ‌ಯ ಸಂಬಂಧ ದಾಖಲೆ ಕೊಡಿ ಸರ್ವೇ ಮಾಡೋಣ ಈ ಶಾಲೆಗೆ ನಾನು ಭೇಟಿ ಕೊಡುತ್ತೇನೆ ಹಿಂದುಳಿದ ಹಾಸ್ಟೆಲ್ ‌ಗಳಲ್ಲಿ ಬುಕ್ ಕಾರ್ನರ್ ಇರಬೇಕು. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಪೂರಕವಾಗಿರಬೇಕು. ರೇಷ್ಮೆಯಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನದಲ್ಲಿ ಬರುವಂತೆ ಮಾಡಬೇಕು ಎಂದು ತಿಳಿಸಿದರು ಸಭೆಯಲ್ಲಿ ತಾಪಂ ಇಒ ಮುನಿಯಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

22 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago