ಇಂದು ಸಂವಿಧಾನ ಅಂಗೀಕರಾವಾದ ದಿನ. 1949ರ ನವೆಂಬರ್ 26 ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲಾ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…