Categories: ಕೋಲಾರ

ಶಾಲೆಯಲ್ಲಿ ಕಲಿತ ಶಿಕ್ಷಣವೇ ಮುಂದಿನ ಜೀವನಕ್ಕೆ ದಾರಿಯಾಗಿದೆ- ಬಿ.ವೆಂಕಟೇಶ್

ಕೋಲಾರ: ಶಾಲೆಯಲ್ಲಿ ಕಲಿತ ಶಿಸ್ತು, ಸಂಯಮ ಮತ್ತು ಸಂಸ್ಕಾರವೇ ಇವತ್ತು ನೀವು ಎಲ್ಲರೂ ವಿವಿಧ ಕ್ಷೇತ್ರಗಳಲ್ಲಿ ಒಂದು ಹಂತಕ್ಕೆ ಹೋಗಿದ್ದು ಅಲ್ಲದೇ ನಿಮ್ಮ ಜೀವನವನ್ನು ನಿಭಾಯಿಸುವ ಶಕ್ತಿ ಬಂದಿದೆ ಎಂಬುದು ನಮಗೆಲ್ಲ ಹೆಮ್ಮೆಯಾಗಿದೆ ಎಂದು ಸಬರಮತಿ ಪ್ರೌಢಶಾಲೆಯ ಕಾರ್ಯದರ್ಶಿ ಬಿ.ವೆಂಕಟೇಶ್ ತಿಳಿಸಿದರು.

ತಾಲೂಕಿನ ಸುಗಟೂರು ಗ್ರಾಮದ ಸಬರಮತಿ ಸಂಯುಕ್ತ ಪ್ರೌಡಶಾಲೆಯಲ್ಲಿ ಭಾನುವಾರ 2004- 2005 ನೇ ಸಾಲಿನ ವಿದ್ಯಾರ್ಥಿಗಳ ಪುನರ್ ಮಿಲನ, ಗುರು ನಮನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾವುಗಳು ಕಲಿತ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಅತ್ಯಮೂಲ್ಯವಾದ ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದು ಹಾಗೂ ವಿದ್ಯೆ ಕಲಿಸಿದ ಗುರುಗಳಿಗೆ ಅಭಿನಂದನೆ ಸಲ್ಲಿಸುವುದು ನಮ್ಮಲ್ಲಿನ ಗೌರವವನ್ನು ಹೆಚ್ಚಿಸುತ್ತದೆ ಇಂತಹ ಕಾರ್ಯಕ್ರಮಗಳು ಮಾದರಿಯಾಗುತ್ತವೆ ಎಂದರು.

ಬಡವರು ಅದರಲ್ಲೂ ಗ್ರಾಮೀಣ ಪ್ರದೇಶದವರ ಶೈಕ್ಷಣಿಕ ಅಭಿವದ್ಧಿಗೆ ಆದ್ಯತೆ ನೀಡಿವು ಹಿನ್ನೆಲೆಯಲ್ಲಿ ಪ್ರಾರಂಭವಾದ ಈ ಶಾಲೆಯು ಇವತ್ತು ಹೆಮ್ಮರವಾಗಿ ಬೆಳೆದು ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡಿದೆ. ಇಲ್ಲಿ ವ್ಯಾಸಂಗ ಮಾಡಿದ್ದ ಬಹಳಷ್ಟು ವಿದ್ಯಾರ್ಥಿಗಳು ಇಂದು ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಮುಂದೆ ಶಾಲೆಯಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಹಳೆ ವಿಧ್ಯಾರ್ಥಿಗಳ ಸಹಕಾರ ಬೆಂಬಲವಿರಲಿ ಎಂದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊಂಡರು ಕಾರ್ಯಕ್ರಮದ ನೆನಪಿಗಾಗಿ ಶಾಲಾ ಆವರಣದಲ್ಲಿ ಗಿಡ ನೆಟ್ಟರು, ಶಿಕ್ಷಕರಾದ ಆರ್ ಚೌಡರೆಡ್ಡಿ, ಚಿ.ನಾ ನಾಗೇಶ್, ಕೆಂಚೇಗೌಡ, ನಾರಾಯಣಸ್ವಾಮಿ, ವಿಶ್ವನಾಥ್, ಹಳೆ ವಿದ್ಯಾರ್ಥಿಗಳಾದ ಮುರಳಿ, ಶ್ವೇತಾ, ಆಕಾಶ್, ಶಿವಕುಮಾರ್, ಸೌಮ್ಯ, ಪ್ರಮೋದ್, ರಾಜು, ಶಾಲಿನಿ, ಸೇರಿದಂತೆ 2005 ನೇ ಸಾಲಿನ ಹಳೆ ವಿಧ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

1 hour ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

2 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

5 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

8 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

20 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

21 hours ago