Categories: ಕೋಲಾರ

ಶಾಲೆಯಲ್ಲಿ ಕಲಿತ ಶಿಕ್ಷಣವೇ ಮುಂದಿನ ಜೀವನಕ್ಕೆ ದಾರಿಯಾಗಿದೆ- ಬಿ.ವೆಂಕಟೇಶ್

ಕೋಲಾರ: ಶಾಲೆಯಲ್ಲಿ ಕಲಿತ ಶಿಸ್ತು, ಸಂಯಮ ಮತ್ತು ಸಂಸ್ಕಾರವೇ ಇವತ್ತು ನೀವು ಎಲ್ಲರೂ ವಿವಿಧ ಕ್ಷೇತ್ರಗಳಲ್ಲಿ ಒಂದು ಹಂತಕ್ಕೆ ಹೋಗಿದ್ದು ಅಲ್ಲದೇ ನಿಮ್ಮ ಜೀವನವನ್ನು ನಿಭಾಯಿಸುವ ಶಕ್ತಿ ಬಂದಿದೆ ಎಂಬುದು ನಮಗೆಲ್ಲ ಹೆಮ್ಮೆಯಾಗಿದೆ ಎಂದು ಸಬರಮತಿ ಪ್ರೌಢಶಾಲೆಯ ಕಾರ್ಯದರ್ಶಿ ಬಿ.ವೆಂಕಟೇಶ್ ತಿಳಿಸಿದರು.

ತಾಲೂಕಿನ ಸುಗಟೂರು ಗ್ರಾಮದ ಸಬರಮತಿ ಸಂಯುಕ್ತ ಪ್ರೌಡಶಾಲೆಯಲ್ಲಿ ಭಾನುವಾರ 2004- 2005 ನೇ ಸಾಲಿನ ವಿದ್ಯಾರ್ಥಿಗಳ ಪುನರ್ ಮಿಲನ, ಗುರು ನಮನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾವುಗಳು ಕಲಿತ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಅತ್ಯಮೂಲ್ಯವಾದ ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದು ಹಾಗೂ ವಿದ್ಯೆ ಕಲಿಸಿದ ಗುರುಗಳಿಗೆ ಅಭಿನಂದನೆ ಸಲ್ಲಿಸುವುದು ನಮ್ಮಲ್ಲಿನ ಗೌರವವನ್ನು ಹೆಚ್ಚಿಸುತ್ತದೆ ಇಂತಹ ಕಾರ್ಯಕ್ರಮಗಳು ಮಾದರಿಯಾಗುತ್ತವೆ ಎಂದರು.

ಬಡವರು ಅದರಲ್ಲೂ ಗ್ರಾಮೀಣ ಪ್ರದೇಶದವರ ಶೈಕ್ಷಣಿಕ ಅಭಿವದ್ಧಿಗೆ ಆದ್ಯತೆ ನೀಡಿವು ಹಿನ್ನೆಲೆಯಲ್ಲಿ ಪ್ರಾರಂಭವಾದ ಈ ಶಾಲೆಯು ಇವತ್ತು ಹೆಮ್ಮರವಾಗಿ ಬೆಳೆದು ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡಿದೆ. ಇಲ್ಲಿ ವ್ಯಾಸಂಗ ಮಾಡಿದ್ದ ಬಹಳಷ್ಟು ವಿದ್ಯಾರ್ಥಿಗಳು ಇಂದು ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಮುಂದೆ ಶಾಲೆಯಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಹಳೆ ವಿಧ್ಯಾರ್ಥಿಗಳ ಸಹಕಾರ ಬೆಂಬಲವಿರಲಿ ಎಂದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊಂಡರು ಕಾರ್ಯಕ್ರಮದ ನೆನಪಿಗಾಗಿ ಶಾಲಾ ಆವರಣದಲ್ಲಿ ಗಿಡ ನೆಟ್ಟರು, ಶಿಕ್ಷಕರಾದ ಆರ್ ಚೌಡರೆಡ್ಡಿ, ಚಿ.ನಾ ನಾಗೇಶ್, ಕೆಂಚೇಗೌಡ, ನಾರಾಯಣಸ್ವಾಮಿ, ವಿಶ್ವನಾಥ್, ಹಳೆ ವಿದ್ಯಾರ್ಥಿಗಳಾದ ಮುರಳಿ, ಶ್ವೇತಾ, ಆಕಾಶ್, ಶಿವಕುಮಾರ್, ಸೌಮ್ಯ, ಪ್ರಮೋದ್, ರಾಜು, ಶಾಲಿನಿ, ಸೇರಿದಂತೆ 2005 ನೇ ಸಾಲಿನ ಹಳೆ ವಿಧ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 hour ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago