Categories: ಕೋಲಾರ

ಶಾಲೆಯಲ್ಲಿ ಕಲಿತ ಶಿಕ್ಷಣವೇ ಮುಂದಿನ ಜೀವನಕ್ಕೆ ದಾರಿಯಾಗಿದೆ- ಬಿ.ವೆಂಕಟೇಶ್

ಕೋಲಾರ: ಶಾಲೆಯಲ್ಲಿ ಕಲಿತ ಶಿಸ್ತು, ಸಂಯಮ ಮತ್ತು ಸಂಸ್ಕಾರವೇ ಇವತ್ತು ನೀವು ಎಲ್ಲರೂ ವಿವಿಧ ಕ್ಷೇತ್ರಗಳಲ್ಲಿ ಒಂದು ಹಂತಕ್ಕೆ ಹೋಗಿದ್ದು ಅಲ್ಲದೇ ನಿಮ್ಮ ಜೀವನವನ್ನು ನಿಭಾಯಿಸುವ ಶಕ್ತಿ ಬಂದಿದೆ ಎಂಬುದು ನಮಗೆಲ್ಲ ಹೆಮ್ಮೆಯಾಗಿದೆ ಎಂದು ಸಬರಮತಿ ಪ್ರೌಢಶಾಲೆಯ ಕಾರ್ಯದರ್ಶಿ ಬಿ.ವೆಂಕಟೇಶ್ ತಿಳಿಸಿದರು.

ತಾಲೂಕಿನ ಸುಗಟೂರು ಗ್ರಾಮದ ಸಬರಮತಿ ಸಂಯುಕ್ತ ಪ್ರೌಡಶಾಲೆಯಲ್ಲಿ ಭಾನುವಾರ 2004- 2005 ನೇ ಸಾಲಿನ ವಿದ್ಯಾರ್ಥಿಗಳ ಪುನರ್ ಮಿಲನ, ಗುರು ನಮನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾವುಗಳು ಕಲಿತ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಅತ್ಯಮೂಲ್ಯವಾದ ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದು ಹಾಗೂ ವಿದ್ಯೆ ಕಲಿಸಿದ ಗುರುಗಳಿಗೆ ಅಭಿನಂದನೆ ಸಲ್ಲಿಸುವುದು ನಮ್ಮಲ್ಲಿನ ಗೌರವವನ್ನು ಹೆಚ್ಚಿಸುತ್ತದೆ ಇಂತಹ ಕಾರ್ಯಕ್ರಮಗಳು ಮಾದರಿಯಾಗುತ್ತವೆ ಎಂದರು.

ಬಡವರು ಅದರಲ್ಲೂ ಗ್ರಾಮೀಣ ಪ್ರದೇಶದವರ ಶೈಕ್ಷಣಿಕ ಅಭಿವದ್ಧಿಗೆ ಆದ್ಯತೆ ನೀಡಿವು ಹಿನ್ನೆಲೆಯಲ್ಲಿ ಪ್ರಾರಂಭವಾದ ಈ ಶಾಲೆಯು ಇವತ್ತು ಹೆಮ್ಮರವಾಗಿ ಬೆಳೆದು ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡಿದೆ. ಇಲ್ಲಿ ವ್ಯಾಸಂಗ ಮಾಡಿದ್ದ ಬಹಳಷ್ಟು ವಿದ್ಯಾರ್ಥಿಗಳು ಇಂದು ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಮುಂದೆ ಶಾಲೆಯಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಹಳೆ ವಿಧ್ಯಾರ್ಥಿಗಳ ಸಹಕಾರ ಬೆಂಬಲವಿರಲಿ ಎಂದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊಂಡರು ಕಾರ್ಯಕ್ರಮದ ನೆನಪಿಗಾಗಿ ಶಾಲಾ ಆವರಣದಲ್ಲಿ ಗಿಡ ನೆಟ್ಟರು, ಶಿಕ್ಷಕರಾದ ಆರ್ ಚೌಡರೆಡ್ಡಿ, ಚಿ.ನಾ ನಾಗೇಶ್, ಕೆಂಚೇಗೌಡ, ನಾರಾಯಣಸ್ವಾಮಿ, ವಿಶ್ವನಾಥ್, ಹಳೆ ವಿದ್ಯಾರ್ಥಿಗಳಾದ ಮುರಳಿ, ಶ್ವೇತಾ, ಆಕಾಶ್, ಶಿವಕುಮಾರ್, ಸೌಮ್ಯ, ಪ್ರಮೋದ್, ರಾಜು, ಶಾಲಿನಿ, ಸೇರಿದಂತೆ 2005 ನೇ ಸಾಲಿನ ಹಳೆ ವಿಧ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

8 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

9 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

9 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

11 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

14 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

15 hours ago