Categories: ಕೋಲಾರ

ಶಾಲೆಯಲ್ಲಿ ಕಲಿತ ಶಿಕ್ಷಣವೇ ಮುಂದಿನ ಜೀವನಕ್ಕೆ ದಾರಿಯಾಗಿದೆ- ಬಿ.ವೆಂಕಟೇಶ್

ಕೋಲಾರ: ಶಾಲೆಯಲ್ಲಿ ಕಲಿತ ಶಿಸ್ತು, ಸಂಯಮ ಮತ್ತು ಸಂಸ್ಕಾರವೇ ಇವತ್ತು ನೀವು ಎಲ್ಲರೂ ವಿವಿಧ ಕ್ಷೇತ್ರಗಳಲ್ಲಿ ಒಂದು ಹಂತಕ್ಕೆ ಹೋಗಿದ್ದು ಅಲ್ಲದೇ ನಿಮ್ಮ ಜೀವನವನ್ನು ನಿಭಾಯಿಸುವ ಶಕ್ತಿ ಬಂದಿದೆ ಎಂಬುದು ನಮಗೆಲ್ಲ ಹೆಮ್ಮೆಯಾಗಿದೆ ಎಂದು ಸಬರಮತಿ ಪ್ರೌಢಶಾಲೆಯ ಕಾರ್ಯದರ್ಶಿ ಬಿ.ವೆಂಕಟೇಶ್ ತಿಳಿಸಿದರು.

ತಾಲೂಕಿನ ಸುಗಟೂರು ಗ್ರಾಮದ ಸಬರಮತಿ ಸಂಯುಕ್ತ ಪ್ರೌಡಶಾಲೆಯಲ್ಲಿ ಭಾನುವಾರ 2004- 2005 ನೇ ಸಾಲಿನ ವಿದ್ಯಾರ್ಥಿಗಳ ಪುನರ್ ಮಿಲನ, ಗುರು ನಮನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾವುಗಳು ಕಲಿತ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಅತ್ಯಮೂಲ್ಯವಾದ ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದು ಹಾಗೂ ವಿದ್ಯೆ ಕಲಿಸಿದ ಗುರುಗಳಿಗೆ ಅಭಿನಂದನೆ ಸಲ್ಲಿಸುವುದು ನಮ್ಮಲ್ಲಿನ ಗೌರವವನ್ನು ಹೆಚ್ಚಿಸುತ್ತದೆ ಇಂತಹ ಕಾರ್ಯಕ್ರಮಗಳು ಮಾದರಿಯಾಗುತ್ತವೆ ಎಂದರು.

ಬಡವರು ಅದರಲ್ಲೂ ಗ್ರಾಮೀಣ ಪ್ರದೇಶದವರ ಶೈಕ್ಷಣಿಕ ಅಭಿವದ್ಧಿಗೆ ಆದ್ಯತೆ ನೀಡಿವು ಹಿನ್ನೆಲೆಯಲ್ಲಿ ಪ್ರಾರಂಭವಾದ ಈ ಶಾಲೆಯು ಇವತ್ತು ಹೆಮ್ಮರವಾಗಿ ಬೆಳೆದು ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡಿದೆ. ಇಲ್ಲಿ ವ್ಯಾಸಂಗ ಮಾಡಿದ್ದ ಬಹಳಷ್ಟು ವಿದ್ಯಾರ್ಥಿಗಳು ಇಂದು ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಮುಂದೆ ಶಾಲೆಯಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಹಳೆ ವಿಧ್ಯಾರ್ಥಿಗಳ ಸಹಕಾರ ಬೆಂಬಲವಿರಲಿ ಎಂದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊಂಡರು ಕಾರ್ಯಕ್ರಮದ ನೆನಪಿಗಾಗಿ ಶಾಲಾ ಆವರಣದಲ್ಲಿ ಗಿಡ ನೆಟ್ಟರು, ಶಿಕ್ಷಕರಾದ ಆರ್ ಚೌಡರೆಡ್ಡಿ, ಚಿ.ನಾ ನಾಗೇಶ್, ಕೆಂಚೇಗೌಡ, ನಾರಾಯಣಸ್ವಾಮಿ, ವಿಶ್ವನಾಥ್, ಹಳೆ ವಿದ್ಯಾರ್ಥಿಗಳಾದ ಮುರಳಿ, ಶ್ವೇತಾ, ಆಕಾಶ್, ಶಿವಕುಮಾರ್, ಸೌಮ್ಯ, ಪ್ರಮೋದ್, ರಾಜು, ಶಾಲಿನಿ, ಸೇರಿದಂತೆ 2005 ನೇ ಸಾಲಿನ ಹಳೆ ವಿಧ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

10 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

10 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

13 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago